ಒಂದು ರಾಜ್ಯದ ನೀರಾವರಿ ಪ್ರದೇಶಕ್ಕೆ ಮತ್ತೊಂದು ರಾಜ್ಯ ಸರ್ಕಾರದ ಪ್ರತಿನಿಧಿಗಳು ಭೇಟಿ ನೀಡುವ ಮೊದಲು ಅಲ್ಲಿಯ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಲೇಬೇಕೆಂಬ ನಿಯಮವನ್ನು ಗಾಳಿಗೆ ತೂರುತ್ತಿರುವ ಗೋವಾ ತನ್ನ ಮೊಂಡತನವನ್ನು ಪ್ರದರ್ಶಿಸುತ್ತಿದೆ. ಅಲ್ಲದೇ ಆಕ್ರಮಣಕಾರಿ ನಿಲುವನ್ನು ತಳೆಯುತ್ತಿದೆ. ಇದನ್ನು ಕರ್ನಾಟಕ ಸರ್ಕಾರ ಯಾವ ರೀತಿ ಎದುರಿಸುವುದೆಂಬುದನ್ನು ಕಾದು ನೋಡಬೇಕು ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋ ಚಂದರಗಿ ತಿಳಿಸಿದ್ದಾರೆ.