ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದಲೇ ಸಾಕಷ್ಟು ಬೆಳೆದಿದ್ದೇವೆ. ಪಕ್ಷದ ಅಭಿವೃದ್ಧಿಗಾಗಿ ಈವರೆಗೂ ದುಡಿದು ಶಕ್ತಿ ಕಳೆದುಕೊಂಡಿದ್ದೇವೆ. ಆದರೆ, ನಾವು ರಾಜಕೀಯ ಸನ್ಯಾಸಿಗಳಲ್ಲ. ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಟಿಕೆಟ್ ನೀಡುವಲ್ಲಿ ಮಲತಾಯಿ ಧೋರಣೆ ತೋರುತ್ತಿದೆ ಎಂದು ದೂರಿದರು.