‘ಉಗ್ರರಾದ ಅಜ್ಮಲ್ ಕಸಬ್ ಹಾಗೂ ಅಬು ಇಸ್ಮಾಯಿಲ್ ಅವರಿಂದ ಹೇಮಂತ್ ಹತ್ಯೆಯಾಗಿಲ್ಲ, ಬದಲಿಗೆ ಬಲಪಂಥೀಯ ಗುಂಪಿನಿಂದ ಹತ್ಯೆಯಾಗಿದ್ದಾರೆ. 2008ರಲ್ಲಿ ಸಂಭವಿಸಿದ್ದ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ್ ಭರತ್ ಸೇರಿದಂತೆ ಹಲವು ಬಲಪಂಥೀಯ ಸಂಘಟನೆಯ ಸದಸ್ಯರನ್ನು ಹೇಮಂತ್ ಬಂಧಿಸಿದ್ದರು. ಈ ಸಿಟ್ಟಿನಿಂದ ಅವರನ್ನು ಹತ್ಯೆ ಮಾಡಲಾಗಿದೆ’ ಎಂದು ದೂರಿ ಯಾದವ್ 2010ರಲ್ಲಿ ಅರ್ಜಿ ಸಲ್ಲಿಸಿದ್ದರು.