ಹುಳಿಯಾರು: ‘ಕೆಲ ಸೌಲಭ್ಯಗಳ ಕೊರತೆ ನಡುವೆಯೂ ಸರ್ಕಾರಿ ಶಾಲೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ‘ ಎಂದು ಸಿಆರ್ಪಿ ದಯಾನಂದ್ ತಿಳಿಸಿದರು. ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
‘ಸಮುದಾಯ ಹಾಗೂ ಪೋಷಕರು ಸರ್ಕಾರಿ ಶಾಲೆಗಳ ಕಡೆ ಗಮನಹರಿಸದರೆ ಉತ್ತಮವಾಗಿ ನಡೆಯುತ್ತವೆ’ಎಂದರು. ಎಂಪಿಎಸ್ ಶಾಲೆಯ ಮುಖ್ಯ ಶಿಕ್ಷಕ ಶಂಕರಪ್ಪ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ
ಕೆಲ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಹಣ ವ್ಯಯ ಮಾಡಿಕೊಳ್ಳುತ್ತಾರೆ’ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್, ಸದಸ್ಯರಾದ ಲಕ್ಷ್ಮಿದೇವಿ, ಗಾಯಿತ್ರಮ್ಮ , ಮಣಿ ಇದ್ದರು. ಶಾಲೆ ಮತ್ತು ಮಕ್ಕಳ ಮನೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.