ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ, ಮೈತ್ರಿಯಿಂದ ಪ್ರಗತಿ, ಧ್ಯಾನದಿಂದ ಸಿದ್ಧಿ ಈ ನಾಲ್ಕು ಸಂದೇಶಗಳನ್ನು ಮಹಾನ್ ತ್ಯಾಗಿ ಬಾಹುಬಲಿ ಸಾರಿದ್ದಾರೆ. ಪ್ರಾರ್ಥನೆಗಳಿಂದ ಮನಸ್ಸು ಶುದ್ಧಿಯಾಗುತ್ತದೆ. ಪ್ರತಿಯೊಂದು ಕೆಲಸದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಸಮಯದ ಸದುಪಯೋಗ ಪಡಿಸಿಕೊಳ್ಳಬೇಕು. ಭಕ್ತಿ ಇದ್ದರೆ ಶ್ರದ್ಧೆ ತಾನಾಗಿಯೇ ಬರುತ್ತದೆ ಎಂದು ತಿಳಿಸಿದರು.