‘ಇಲ್ಲಿ ಕಾಂಗ್ರೆಸ್ ಲಂಬಾಣಿ ಸಮಾಜದ ರುದ್ರಪ್ಪ ಲಮಾಣಿ ಹಾಗೂ ಜೆಡಿಎಸ್ ಬಲಗೈ ಚಲವಾದಿ ಸಮಾಜದ ಡಾ.ಸಂಜಯ ಡಾಂಗೆ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಆದರೆ, ಬಿಜೆಪಿ ಟಿಕೆಟ್ ಇನ್ನೂ ಘೋಷಣೆ ಆಗಿಲ್ಲ. ಹೀಗಾಗಿ ಬಿಜೆಪಿಯಲ್ಲಿನ ಆಕಾಂಕ್ಷಿಗಳಾದ ನಾನು (ಡಿ.ಎಸ್.ಮಾಳಗಿ), ಪರಮೇಶಪ್ಪ ಮೇಗಳಮನಿ, ಡಾ. ಮಲ್ಲೇಶಪ್ಪ ಹರಿಜನ, ಶಿವರಾಜ ಹರಿಜನ, ಮಹದೇವಪ್ಪ ನಾಗಮ್ಮನವರ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣನವರ ಸೇರಿದಂತೆ ಆರು ಮಂದಿಯ ಪೈಕಿ ಒಬ್ಬರಿಗೆ ಟಿಕೆಟ್ ನೀಡಬೇಕು’ ಎಂದು ಇಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿನಂತಿ ಮಾಡಿದರು.