‘ಈ ದೇಶವನ್ನು ಸ್ವಚ್ಛ ಮಾಡುವವರು ದಲಿತ ಪೌರ ಕಾರ್ಮಿಕರು. ಮೂರು ತಿಂಗಳಾದರೂ ಸಂಬಳ ಸಿಗದೆ ಅವರು ಪರದಾಡುವ ಸ್ಥಿತಿಯಲ್ಲಿದ್ದಾರೆ. ಆದರೆ, ಈಗ ನಿಜವಾಗಿ ಸ್ವಚ್ಛಗೊಳಿಸಬೇಕಾಗಿರುವುದು ಮನುಸಂಸ್ಕೃತಿಯನ್ನು ಜಪಿಸುತ್ತ, ಅಸ್ಪೃಶ್ಯತೆಯನ್ನು ಜೀವಂತ ಇಡುತ್ತಿರುವವರ ನಾಲಿಗೆ ಹಾಗೂ ಹೃದಯವನ್ನು’ ಎಂದು ಅಂಬೇಡ್ಕರ್ ಯುವ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಪಿ. ಸಂತೋಷ್ ಕಿಡಿಕಾರಿದರು.