‘ಸ್ಥಳೀಯರನ್ನು ಕೆಲಸದಿಂದ ತೆಗೆಯುವ ಉದ್ದೇಶದಿಂದ ಕಂಪನಿಯವರು ಈ ರೀತಿ ಮಾಡುತ್ತಿದ್ದಾರೆ. ಈ ವರ್ತನೆ ಖಂಡಿಸಿ ಕಳೆದ ತಿಂಗಳು ಪ್ರತಿಭಟನೆ ನಡೆಸಿದ್ದೆವು. ಅದೇ ಕಾರಣ ಮುಂದಿಟ್ಟುಕೊಂಡು ಹಲವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ನೌಕರರು, ಕಾರ್ಮಿಕ ಇಲಾಖೆಯಲ್ಲಿ ಮೊಕದ್ದಮೆ ಹೂಡಿದ್ದು ವಿಚಾರಣೆ ನಡೆಯುತ್ತಿದೆ’ ಎಂದರು.