1996ರ ಮೇ 20ರಂದು ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಪಕ್ಷದ ಸಭೆಯಲ್ಲಿ ಪಕ್ಷದೊಳಗಿನ ಆಂತರಿಕ ಜಗಳ ವಿಕೋಪಕ್ಕೆ ತಿರುಗಿತ್ತು. ಹಿರಿಯ ನಾಯಕರಾದ ಆತ್ಮರಾಮ್ ಪಟೇಲ್ ಮತ್ತು ಶಂಕರ್ಸಿನ್ಹಾ ವಘೇಲ ಅವರ ಬೆಂಬಲಿಗರು ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ವಿರುದ್ಧ ದಂಗೆ ಎದ್ದಿದ್ದರು. ಮುಖ್ಯಮಂತ್ರಿಗಳ ಬೆಂಬಲಿಗರು ಆತ್ಮರಾಮ್ ಪಟೇಲ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.