ಜಮ್ಮು : ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸುತ್ತಿರುವ ವಿಚಾರ ಜಮ್ಮು–ಕಾಶ್ಮೀರದ ವಿಧಾನಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು. ಗಡಿನಿಯಂತ್ರಣ ರೇಖೆಯಲ್ಲಿ ತೀರಾ ಕೆಟ್ಟ ಪರಿಸ್ಥಿತಿ ಇದೆ. ಈ ಬಗ್ಗೆ ವಿವರಣೆ ನೀಡಬೇಕು ಎಂದು ಬಿಜೆಪಿ ಮತ್ತು ಸಿಪಿಐಎಂ ಸದಸ್ಯರು ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರನ್ನು ಒತ್ತಾಯಿಸಿದರು.