ಬೆಂಗಳೂರು: ತಂತ್ರಜ್ಞಾನ ಕ್ಷೇತ್ರ ಅಭಿವೃದ್ಧಿ ಹೊಂದಿದಂತೆ ಕಲಾವಿದರ ಕುಲ ಕಸುಬಿಗೆ ಬೇಡಿಕೆ ಇಲ್ಲವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.
ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಕುಟುಂಬ ನಿರ್ವಹಣೆಗೂ ಸಾಧ್ಯವಾಗದಷ್ಟು ಕಷ್ಟದಲ್ಲಿ ಕಲಾವಿದರಿದ್ದಾರೆ. ಅಂತಹ ಕಲಾವಿದರಿಗೆ ಕನಿಷ್ಠ ₹ 5,000 ಪಿಂಚಣಿ ನೀಡಬೇಕು ಎಂದು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ರು. ಕಾಳಾಚಾರ್ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆಂಜನೇಯ, ‘ಕಲಾವಿದರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರುತ್ತೇನೆ’ ಎಂದು ಭರವಸೆ ನೀಡಿದರು.