ಉದ್ಯಮಿಗಳು ಉದ್ಯಮದಲ್ಲಿ ನಷ್ಟವಾಗಿ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಜಗತ್ತಿನಲ್ಲಿ ಇಲ್ಲ. ದೇಶದಲ್ಲಿ 12 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಪಟ್ಟಿ ಇದೆ. ರೈತರು ಕೃಷಿಗೆ ಮಾಡಿದ ಖರ್ಚಿಗೆ ತಕ್ಕ ಆದಾಯ ಸಿಗಬೇಕು. ಎಲ್ಲ ರಾಜ್ಯಗಳಲ್ಲಿ ಬೆಂಬಲ ಬೆಲೆ ಆಯೋಗ ಇದೆ. ಕೇಂದ್ರದಲ್ಲೂ ಕೃಷಿ ಆಯೋಗ ಇದೆ. ಆದರೆ, ರಾಜ್ಯ ಆಯೋಗಗಳು ಕಳುಹಿಸುವ ವರದಿಯಲ್ಲಿ ಬೆಂಬಲ ಬೆಲೆಗೆ ಕೇಂದ್ರದ ಅಧಿಕಾರಿಗಳು ಶೇ 50ರಷ್ಟು ಕತ್ತರಿ ಹಾಕುತ್ತಾರೆ ಎಂದು ಹಜಾರೆ ಕಿಡಿಕಾರಿದರು.