ಪರಿಸ್ಥಿತಿ ಶಾಂತ: ಈ ಮಧ್ಯೆ ಕಾಸ್ಗಂಜ್ ಗಡಿಗೆ ಸಮೀಪದ ಮಿರ್ಹಾಚಿ ಪ್ರದೇಶದಲ್ಲಿ ಕಾಂಗ್ರೆಸ್ ನಿಯೋಗಕ್ಕೆ ಜಿಲ್ಲಾಡಳಿತ ತಡೆ ಒಡ್ಡಿದೆ. ಗಲಭೆಪೀಡಿದ ಪ್ರದೇಶಗಳಿಗೆ ತೆರಳುವುದರಿಂದ ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆಯಿದ್ದು, ಅನುಮತಿ ನಿರಾಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಪಿ. ಸಿಂಗ್ ಹೇಳಿದ್ದಾರೆ.