ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕದಂಬೋತ್ಸವ: ಪಂಪ ಪ್ರಶಸ್ತಿ ಪ್ರದಾನ ಇಂದು

Last Updated 1 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಶಿರಸಿ: ಬನವಾಸಿಯಲ್ಲಿ ಶುಕ್ರವಾರ ಮತ್ತು ಶನಿವಾರ (ಫೆ.2, 3) ಕದಂಬೋತ್ಸವ ಆಚರಣೆಗೆ ಭರದ ಸಿದ್ಧತೆಗಳು ನಡೆದಿವೆ. ಕದಂಬ ರಾಜಮನೆತನದ ಸ್ಮರಣೆಯಲ್ಲಿ ನಡೆಯುವ ಈ ಉತ್ಸವದಲ್ಲಿ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ಕವಿ ಡಾ. ಕೆ.ಎಸ್. ನಿಸಾರ್ ಅಹಮದ್ ಅವರಿಗೆ ಪ್ರದಾನ ಮಾಡಲಾಗುತ್ತದೆ.

ಪುರಾತನ ಮಧುಕೇಶ್ವರ ದೇವಾಲಯದ ಪ್ರತಿಕೃತಿಯ ಮಾದರಿಯಲ್ಲಿ ಸಿದ್ಧವಾಗಿರುವ ವೇದಿಕೆಯಲ್ಲಿ ಸಚಿವ ಆರ್‌.ವಿ.ದೇಶಪಾಂಡೆ ಅವರು ಸಂಜೆ 7 ಗಂಟೆಗೆ ಕದಂಬೋತ್ಸವ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಭಾಗವಹಿಸುವರು. ಉತ್ಸವದ ಅಂಗವಾಗಿ ಅನಾನಸ್ ಮೇಳ, ಕಾರ್ಟೂನ್ ಉತ್ಸವ, ಗಾಯಕರಾದ ಗುರುಕಿರಣ್ ಹಾಗೂ ಅರ್ಚನಾ ಉಡುಪ ಅವರ ರಸಮಂಜರಿ ಹಮ್ಮಿಕೊಳ್ಳಲಾಗಿದೆ.

ಪಂಪ ಪ್ರಶಸ್ತಿ ಪ್ರದಾನಕ್ಕೆ ಮುಖ್ಯಮಂತ್ರಿ ಬರುತ್ತಿಲ್ಲ. ಗುರುವಾರ ಸಂಜೆ ಶಿರಸಿಗೆ ಆಗಮಿಸಿರುವ ನಿಸಾರ್ ಅಹಮದ್ ಅವರು  ಬನವಾಸಿಗೆ ಭೇಟಿ ನೀಡಿ, ಮಧುಕೇಶ್ವರ ದೇವಾಲಯದ ಶಿಲ್ಪಕಲೆಯನ್ನು ವೀಕ್ಷಿಸಿದರು. ಅಲ್ಲಿಯೇ ಪ್ರವಾಸಕ್ಕೆ ಬಂದಿದ್ದ ಮಕ್ಕಳ ಜೊತೆ ಸಮಯ ಕಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT