ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದ್ ಸಿಂಗ್ ಕಾಂಗ್ರೆಸ್‌ ಸೇರ್ಪಡೆಗೆ ಆಕ್ಷೇಪ: ಸಚಿವ ಸಂತೋಷ್ ಲಾಡ್ ಜತೆ ವಾಗ್ವಾದ ನಡೆಸಿದ ಕಾಂಗ್ರೆಸ್ ಮುಖಂಡ

Last Updated 2 ಫೆಬ್ರುವರಿ 2018, 13:44 IST
ಅಕ್ಷರ ಗಾತ್ರ

ಹೊಸಪೇಟೆ: ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಫೇಬ್ರುವರಿ 10 ರಂದು ನಗರಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಇಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಗೂ ಕಾಂಗ್ರೆಸ್ ಮುಖಂಡ ದೀಪಕ್ ಕುಮಾರ್ ಸಿಂಗ್ ನಡುವೆ ವಾಗ್ವಾದ ನಡೆಯಿತು.

‘ಆನಂದ್ ಸಿಂಗ್ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದು ತಪ್ಪು. ಸಚಿವರಾದ ನೀವು ತಪ್ಪು ಮಾಡಿದ್ದೀರಿ’ ಎಂದು ದೀಪಕ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್ ಅವರು, ‘ಈ ಬಗ್ಗೆ ನನ್ನನ್ನು ಕೇಳಬೇಡಿ. ಏನಿದ್ದರೂ ಹೈಕಮಾಂಡ್ ಕೇಳಿ’ ಎಂದು ಹೇಳಿದರು.

ಈ ವೇಳೆ, ‘ಹಾಗಿದ್ದರೆ ಇಲ್ಲಿ ನಾವು ಮಾಡುತ್ತಿರುವ ಕೆಲಸವನ್ನು ಹೈಕಮಾಂಡ್‌ ಬಂದು ನೋಡುತ್ತದೆಯೇ’ ಎಂದು ಸಿಂಗ್‌ ಪ್ರಶ್ನಿಸಿದರು. ಇದರಿಂದಾಗಿ ವೇದಿಕೆಯಲ್ಲೇ ಇಬ್ಬರ ಮಧ್ಯೆ ವಾಗ್ವಾದ ನಡೆದು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT