<p>ನವದೆಹಲಿ: 2017–18ರ ಕೇಂದ್ರ ಬಜೆಟ್ನಲ್ಲಿ ಪ್ರಕಟಿಸಿದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಆರೋಗ್ಯ ರಕ್ಷಣೆ ಯೋಜನೆಗೆ (ಎನ್ಎಚ್ಪಿಎಸ್) ಸರ್ಕಾರವು ವರ್ಷವೊಂದಕ್ಕೆ ಮಾಡಬೇಕಿರುವ ವೆಚ್ಚದ ಮೊತ್ತ ಸುಮಾರು ₹12 ಸಾವಿರ ಕೋಟಿ. ಪ್ರತಿ ಕುಟುಂಬಕ್ಕೆ ತುಂಬಬೇಕಿರುವ ವಿಮಾ ಕಂತು ₹1200ಕ್ಕಿಂತ ಕಡಿಮೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಗುರುವಾರ ಮಂಡಿಸಲಾದ ಬಜೆಟ್ನಲ್ಲಿ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಉಚಿತ ಆರೋಗ್ಯ ಸೇವೆಯ ಯೋಜನೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರಕಟಿಸಿದ್ದರು. ವರ್ಷಕ್ಕೆ ಗರಿಷ್ಠ ₹5 ಲಕ್ಷದವರೆಗೆ ಚಿಕಿತ್ಸೆ ಪಡೆಯಲು ಈ ಯೋಜನೆಯಲ್ಲಿ ಅವಕಾಶ ಇದೆ.</p>.<p>2018–19ನೇ ವರ್ಷಕ್ಕೆ ಈ ಯೋಜನೆಗೆ ₹2,000 ಕೋಟಿ ಮೀಸಲಿರಿಸಲಾಗಿದೆ. ರಾಜ್ಯಗಳು ಈ ಯೋಜನೆಗೆ ಸೇರ್ಪಡೆಯಾಗಲಿವೆ.</p>.<p>ರಾಜ್ಯಗಳು ₹800 ಕೋಟಿ ನೀಡಲಿವೆ. ಆರೋಗ್ಯ ಮತ್ತು ಶಿಕ್ಷಣ ಉಪತೆರಿಗೆಯನ್ನು (ಸೆಸ್) ಬಜೆಟ್ನಲ್ಲಿ ಹೆಚ್ಚಿಸಲಾಗಿದೆ. ಇದರಿಂದಲೂ ಸ್ವಲ್ಪ ಹಣ ಎನ್ಎಚ್ಪಿಎಸ್ಗೆ ದೊರೆಯಲಿದೆ. ಯೋಜನೆ ಆರಂಭಿಸಲು ಈ ಮೊತ್ತ ಸಾಕಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಆಸ್ಪತ್ರೆಗೆ ದಾಖಲಾಗಿ ಪಡೆಯುವ ಚಿಕಿತ್ಸೆಯು ಈ ಯೋಜನೆಯ ವ್ಯಾಪ್ತಿಗೆ ಬರಲಿದೆ. ರಾಜ್ಯ ಸರ್ಕಾರಗಳ ಆಸ್ಪತ್ರೆಗಳ ಜತೆಗೆ ಕೆಲವು ಖಾಸಗಿ ಆಸ್ಪತ್ರೆಗಳನ್ನೂ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಜೇಟ್ಲಿ ಹೇಳಿದ್ದಾರೆ.</p>.<p>ವಿಮಾ ಕಂಪನಿಗಳು ಲಾಭ ಮಾಡಿಕೊಳ್ಳಲು ಈ ಯೋಜನೆಯು ಅವಕಾಶ ಕೊಡುತ್ತದೆ ಎಂಬ ಟೀಕೆಯನ್ನು ಆರೋಗ್ಯ ಸಚಿವಾಲಯದ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಆಡಳಿತಾತ್ಮಕ ವೆಚ್ಚ ಮತ್ತು ಲಾಭವನ್ನು ಒಟ್ಟು ಯೋಜನೆಯ ಶೇ 20ರೊಳಗೇ ಇರಿಸಿಕೊಳ್ಳಬೇಕು ಎಂದು ವಿಮಾ ಕಂಪನಿಗಳಿಗೆ ಸೂಚಿಸಲಾಗುವುದು ಎಂದು ಈ ಮೂಲಗಳು ಹೇಳಿವೆ.</p>.<p>ಎನ್ಎಚ್ಪಿಎಸ್ಗೆ ತಗಲುವ ಒಟ್ಟು ವೆಚ್ಚದಲ್ಲಿ ಶೇ 60ರಷ್ಟನ್ನು ಕೇಂದ್ರ ಸರ್ಕಾರ ಭರಿಸಲಿದೆ. ಉಳಿದ ಮೊತ್ತವನ್ನು ರಾಜ್ಯ ಸರ್ಕಾರಗಳು ನೀಡಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ. ವೃದ್ಧಾಪ್ಯದ ಕಾಯಿಲೆಗಳಿಗೂ ಯೋಜನೆ ಅಡಿ ಚಿಕಿತ್ಸೆ ದೊರೆಯಲಿದೆ ಎಂದು ತಿಳಿಸಿದ್ದಾರೆ.</p>.<p>ಯೋಜನೆಯು ಆಧಾರ್ನೊಂದಿಗೆ ಜೋಡಣೆಯಾಗಲಿದೆ. ಆದರೆ ಆಧಾರ್ ಇಲ್ಲ ಎಂಬ ಕಾರಣಕ್ಕೆ ಯೋಜನೆಯ ಸೌಲಭ್ಯ ನಿರಾಕರಿಸಲಾಗುವುದಿಲ್ಲ ಎಂದೂ ಅವರು ಹೇಳಿದ್ದಾರೆ.</p>.<p>ಈ ಯೋಜನೆಯು ಭಾರತದ ಸಾಮಾಜಿಕ ಆರ್ಥಿಕ ಚಿತ್ರಣವನ್ನೇ ಬದಲಿಸಲಿದೆ. ಆಸ್ಪತ್ರೆ ವೆಚ್ಚಗಳಿಂದಾಗಿ ಎಷ್ಟೋ ಕುಟುಂಬಗಳು ದಿವಾಳಿಯಾಗುತ್ತಿವೆ. ಯೋಜನೆಯು ಇದನ್ನು ತಡೆಯಲಿದೆ. ಅಷ್ಟಲ್ಲದೆ ದೇಶದ ಉತ್ಪಾದಕತೆಯೂ ಹೆಚ್ಚಲಿದೆ ಎಂದು ನಡ್ಡಾ ಅಭಿಪ್ರಾಯಪಟ್ಟಿದ್ದಾರೆ.</p>.<p>ಆರೋಗ್ಯ ಸೇವೆಗಳಿಗಾಗಿ ಜನರು ಮಾಡುವ ವೆಚ್ಚ ದೇಶದ ಜನರ ಅತ್ಯಂತ ದೊಡ್ಡ ಸಮಸ್ಯೆಯಾಗಿದೆ. ಶೇ 62ರಷ್ಟು ಜನರ ಜೀವನದ ಮೇಲೆ ಇದು ಪ್ರತಿಕೂಲ ಪರಿಣಾಮ ಉಂಟು ಮಾಡುತ್ತಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿಯೂ ಹೇಳಲಾಗಿತ್ತು.<br /> ***<br /> * ಅಕ್ಟೋಬರ್ 2ರಿಂದ ಯೋಜನೆಗೆ ಚಾಲನೆ ಸಾಧ್ಯತೆ</p>.<p>* ಫಲಾನುಭವಿಗಳಿಗೆ ನಗದುರಹಿತ ಚಿಕಿತ್ಸೆ; ಚಿಕಿತ್ಸೆಗೆ ಪಾವತಿಸಿದ ಬಳಿಕ ವೆಚ್ಚ ತುಂಬಿಸಿಕೊಡುವಿಕೆ ಅಲ್ಲ</p>.<p><strong>ಯೋಜನೆ ಅನುಷ್ಠಾನಕ್ಕೆ ಎರಡು ಮಾರ್ಗಗಳು</strong></p>.<p>1. ಖಾಸಗಿ ಕಂಪನಿಯೊಂದರಿಂದ ವಿಮೆ ಖರೀದಿ</p>.<p>2. ಸರ್ಕಾರದ ಬೆಂಬಲದಲ್ಲಿ ಟ್ರಸ್ಟ್ ಸ್ಥಾಪಿಸಿ ಅದರ ಮೂಲಕ ವಿಮೆ<br /> ಯಾವ ಮಾದರಿ ಅನುಸರಿಸಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: 2017–18ರ ಕೇಂದ್ರ ಬಜೆಟ್ನಲ್ಲಿ ಪ್ರಕಟಿಸಿದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಆರೋಗ್ಯ ರಕ್ಷಣೆ ಯೋಜನೆಗೆ (ಎನ್ಎಚ್ಪಿಎಸ್) ಸರ್ಕಾರವು ವರ್ಷವೊಂದಕ್ಕೆ ಮಾಡಬೇಕಿರುವ ವೆಚ್ಚದ ಮೊತ್ತ ಸುಮಾರು ₹12 ಸಾವಿರ ಕೋಟಿ. ಪ್ರತಿ ಕುಟುಂಬಕ್ಕೆ ತುಂಬಬೇಕಿರುವ ವಿಮಾ ಕಂತು ₹1200ಕ್ಕಿಂತ ಕಡಿಮೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಗುರುವಾರ ಮಂಡಿಸಲಾದ ಬಜೆಟ್ನಲ್ಲಿ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಉಚಿತ ಆರೋಗ್ಯ ಸೇವೆಯ ಯೋಜನೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರಕಟಿಸಿದ್ದರು. ವರ್ಷಕ್ಕೆ ಗರಿಷ್ಠ ₹5 ಲಕ್ಷದವರೆಗೆ ಚಿಕಿತ್ಸೆ ಪಡೆಯಲು ಈ ಯೋಜನೆಯಲ್ಲಿ ಅವಕಾಶ ಇದೆ.</p>.<p>2018–19ನೇ ವರ್ಷಕ್ಕೆ ಈ ಯೋಜನೆಗೆ ₹2,000 ಕೋಟಿ ಮೀಸಲಿರಿಸಲಾಗಿದೆ. ರಾಜ್ಯಗಳು ಈ ಯೋಜನೆಗೆ ಸೇರ್ಪಡೆಯಾಗಲಿವೆ.</p>.<p>ರಾಜ್ಯಗಳು ₹800 ಕೋಟಿ ನೀಡಲಿವೆ. ಆರೋಗ್ಯ ಮತ್ತು ಶಿಕ್ಷಣ ಉಪತೆರಿಗೆಯನ್ನು (ಸೆಸ್) ಬಜೆಟ್ನಲ್ಲಿ ಹೆಚ್ಚಿಸಲಾಗಿದೆ. ಇದರಿಂದಲೂ ಸ್ವಲ್ಪ ಹಣ ಎನ್ಎಚ್ಪಿಎಸ್ಗೆ ದೊರೆಯಲಿದೆ. ಯೋಜನೆ ಆರಂಭಿಸಲು ಈ ಮೊತ್ತ ಸಾಕಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಆಸ್ಪತ್ರೆಗೆ ದಾಖಲಾಗಿ ಪಡೆಯುವ ಚಿಕಿತ್ಸೆಯು ಈ ಯೋಜನೆಯ ವ್ಯಾಪ್ತಿಗೆ ಬರಲಿದೆ. ರಾಜ್ಯ ಸರ್ಕಾರಗಳ ಆಸ್ಪತ್ರೆಗಳ ಜತೆಗೆ ಕೆಲವು ಖಾಸಗಿ ಆಸ್ಪತ್ರೆಗಳನ್ನೂ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಜೇಟ್ಲಿ ಹೇಳಿದ್ದಾರೆ.</p>.<p>ವಿಮಾ ಕಂಪನಿಗಳು ಲಾಭ ಮಾಡಿಕೊಳ್ಳಲು ಈ ಯೋಜನೆಯು ಅವಕಾಶ ಕೊಡುತ್ತದೆ ಎಂಬ ಟೀಕೆಯನ್ನು ಆರೋಗ್ಯ ಸಚಿವಾಲಯದ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಆಡಳಿತಾತ್ಮಕ ವೆಚ್ಚ ಮತ್ತು ಲಾಭವನ್ನು ಒಟ್ಟು ಯೋಜನೆಯ ಶೇ 20ರೊಳಗೇ ಇರಿಸಿಕೊಳ್ಳಬೇಕು ಎಂದು ವಿಮಾ ಕಂಪನಿಗಳಿಗೆ ಸೂಚಿಸಲಾಗುವುದು ಎಂದು ಈ ಮೂಲಗಳು ಹೇಳಿವೆ.</p>.<p>ಎನ್ಎಚ್ಪಿಎಸ್ಗೆ ತಗಲುವ ಒಟ್ಟು ವೆಚ್ಚದಲ್ಲಿ ಶೇ 60ರಷ್ಟನ್ನು ಕೇಂದ್ರ ಸರ್ಕಾರ ಭರಿಸಲಿದೆ. ಉಳಿದ ಮೊತ್ತವನ್ನು ರಾಜ್ಯ ಸರ್ಕಾರಗಳು ನೀಡಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ. ವೃದ್ಧಾಪ್ಯದ ಕಾಯಿಲೆಗಳಿಗೂ ಯೋಜನೆ ಅಡಿ ಚಿಕಿತ್ಸೆ ದೊರೆಯಲಿದೆ ಎಂದು ತಿಳಿಸಿದ್ದಾರೆ.</p>.<p>ಯೋಜನೆಯು ಆಧಾರ್ನೊಂದಿಗೆ ಜೋಡಣೆಯಾಗಲಿದೆ. ಆದರೆ ಆಧಾರ್ ಇಲ್ಲ ಎಂಬ ಕಾರಣಕ್ಕೆ ಯೋಜನೆಯ ಸೌಲಭ್ಯ ನಿರಾಕರಿಸಲಾಗುವುದಿಲ್ಲ ಎಂದೂ ಅವರು ಹೇಳಿದ್ದಾರೆ.</p>.<p>ಈ ಯೋಜನೆಯು ಭಾರತದ ಸಾಮಾಜಿಕ ಆರ್ಥಿಕ ಚಿತ್ರಣವನ್ನೇ ಬದಲಿಸಲಿದೆ. ಆಸ್ಪತ್ರೆ ವೆಚ್ಚಗಳಿಂದಾಗಿ ಎಷ್ಟೋ ಕುಟುಂಬಗಳು ದಿವಾಳಿಯಾಗುತ್ತಿವೆ. ಯೋಜನೆಯು ಇದನ್ನು ತಡೆಯಲಿದೆ. ಅಷ್ಟಲ್ಲದೆ ದೇಶದ ಉತ್ಪಾದಕತೆಯೂ ಹೆಚ್ಚಲಿದೆ ಎಂದು ನಡ್ಡಾ ಅಭಿಪ್ರಾಯಪಟ್ಟಿದ್ದಾರೆ.</p>.<p>ಆರೋಗ್ಯ ಸೇವೆಗಳಿಗಾಗಿ ಜನರು ಮಾಡುವ ವೆಚ್ಚ ದೇಶದ ಜನರ ಅತ್ಯಂತ ದೊಡ್ಡ ಸಮಸ್ಯೆಯಾಗಿದೆ. ಶೇ 62ರಷ್ಟು ಜನರ ಜೀವನದ ಮೇಲೆ ಇದು ಪ್ರತಿಕೂಲ ಪರಿಣಾಮ ಉಂಟು ಮಾಡುತ್ತಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿಯೂ ಹೇಳಲಾಗಿತ್ತು.<br /> ***<br /> * ಅಕ್ಟೋಬರ್ 2ರಿಂದ ಯೋಜನೆಗೆ ಚಾಲನೆ ಸಾಧ್ಯತೆ</p>.<p>* ಫಲಾನುಭವಿಗಳಿಗೆ ನಗದುರಹಿತ ಚಿಕಿತ್ಸೆ; ಚಿಕಿತ್ಸೆಗೆ ಪಾವತಿಸಿದ ಬಳಿಕ ವೆಚ್ಚ ತುಂಬಿಸಿಕೊಡುವಿಕೆ ಅಲ್ಲ</p>.<p><strong>ಯೋಜನೆ ಅನುಷ್ಠಾನಕ್ಕೆ ಎರಡು ಮಾರ್ಗಗಳು</strong></p>.<p>1. ಖಾಸಗಿ ಕಂಪನಿಯೊಂದರಿಂದ ವಿಮೆ ಖರೀದಿ</p>.<p>2. ಸರ್ಕಾರದ ಬೆಂಬಲದಲ್ಲಿ ಟ್ರಸ್ಟ್ ಸ್ಥಾಪಿಸಿ ಅದರ ಮೂಲಕ ವಿಮೆ<br /> ಯಾವ ಮಾದರಿ ಅನುಸರಿಸಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>