ಸೊಹ್ರಾಬುದ್ದೀನ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೂ ಆರೋಪಿಯಾಗಿದ್ದು, ಅವರ ಹೆಸರನ್ನು ಕೈಬಿಡಲಾಗಿದೆ. ಆದ್ದರಿಂದ ಅವರಿಗೂ ಈ ಪ್ರಕಣದಲ್ಲಿ ನೋಟಿಸ್ ಜಾರಿಗೊಳಿಸಬೇಕು ಎಂದು ಅರ್ಜಿದಾರರು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ, ‘ನಮ್ಮ ವ್ಯಾಪ್ತಿ ಮೀರಲು ಆಗುವುದಿಲ್ಲ’ ಎಂದು ಹೇಳಿ ವಿಚಾರಣೆಯನ್ನು ಫೆಬ್ರುವರಿ 8ಕ್ಕೆ ಮುಂದೂಡಿದರು. ಅಂದು ಈ ಕುರಿತು ವಾದ ಮಂಡಿಸಬಹುದು ಎಂದು ವಕೀಲರಿಗೆ ಸೂಚಿಸಿದರು.