ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಯ: ವಿಚಾರಣೆ ವ್ಯಾಪ್ತಿ ವಿಸ್ತರಣೆಗೆ ನಕಾರ

Last Updated 2 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಸಿಬಿಐ ವಿಶೇಷ ನ್ಯಾಯಾಧೀಶ ಎಚ್.ಬಿ. ಲೋಯ ಅವರ ಸಾವಿನ ಕುರಿತಾದ ಪ್ರಕರಣದ ವಿಚಾರಣೆಯಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವುದು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಲೋಯ ಅವರು ನಿಗೂಢವಾಗಿ ಸಾವನ್ನಪ್ಪಿದ್ದು, ಈ ಕುರಿತು ಸ್ವತಂತ್ರ ತನಿಖೆ ನಡೆಸುವ ಅವಶ್ಯಕತೆ ಇರುವುದಾಗಿ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಸೊಹ್ರಾಬುದ್ದೀನ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರೂ ಆರೋಪಿಯಾಗಿದ್ದು, ಅವರ ಹೆಸರನ್ನು ಕೈಬಿಡಲಾಗಿದೆ. ಆದ್ದರಿಂದ ಅವರಿಗೂ ಈ ಪ್ರಕಣದಲ್ಲಿ ನೋಟಿಸ್‌ ಜಾರಿಗೊಳಿಸಬೇಕು ಎಂದು ಅರ್ಜಿದಾರರು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ, ‘ನಮ್ಮ ವ್ಯಾಪ್ತಿ ಮೀರಲು ಆಗುವುದಿಲ್ಲ’ ಎಂದು ಹೇಳಿ ವಿಚಾರಣೆಯನ್ನು ಫೆಬ್ರುವರಿ 8ಕ್ಕೆ ಮುಂದೂಡಿದರು. ಅಂದು ಈ ಕುರಿತು ವಾದ ಮಂಡಿಸಬಹುದು ಎಂದು ವಕೀಲರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT