ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಕೃಷಿ ಸಚಿವ ರಾಧಾಮೋಹನ್ ಸಿಂಗ್, ‘ ಕಳೆದ ಮೂರುವರೆ ವರ್ಷಗಳಲ್ಲಿ ಗೋ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಗೋವುಗಳ ರಕ್ಷಣೆಗಾಗಿ ನಾವು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದೇ ದಿಕ್ಕಿನಲ್ಲಿ ಮುಂದುವರಿಯುವ ಭರವಸೆಯನ್ನು ಸ್ವಾಮಿ ಅವರಿಗೆ ನೀಡುತ್ತೇನೆ. ಮಸೂದೆಯನ್ನು ವಾಪಸ್ ಪಡೆಯುವಂತೆ ಅವರಿಗೆ ಮನವಿ ಮಾಡುತ್ತೇನೆ’ ಎಂದು ಸಿಂಗ್ ಹೇಳಿದರು.