ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಶಾಸಕರಾಗಿದ್ದ ಹಾಲಾಡಿ, ತಮ್ಮನ್ನು ಕಡೆಗಣಿಸಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡರು ಎಂಬ ಸಿಟ್ಟಿನಿಂದ ಪಕ್ಷ ತೊರೆದಿದ್ದರು. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಚುನಾಯಿತರಾಗಿದ್ದರು. ಶಾಸಕ ಸ್ಥಾನಕ್ಕೆ ಇತ್ತೀಚೆಗೆ ಅವರು ರಾಜೀನಾಮೆ ನೀಡಿದ್ದರು.