ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಉಪ ಕುಲಸಚಿವರಾಗಿದ್ದ ಪ್ರೇಮಕುಮಾರ್ ಅವರನ್ನು ಜಾನಪದ ವಿಶ್ವವಿದ್ಯಾಲಯಕ್ಕೆ ಹಿರಿಯ ಸಂಶೋಧನಾಧಿಕಾರಿಯನ್ನಾಗಿ ನಿಯೋಜಿಸಲಾಗಿತ್ತು. ನಂತರ, ಅವರನ್ನು ಇಲ್ಲಿನ ಭಾಷಾಂತರ ಕೇಂದ್ರದ ನಿರ್ದೇಶಕ ಮತ್ತು ಪ್ರಾಧ್ಯಾಪಕ ಹುದ್ದೆಯಲ್ಲಿ ವಿಲೀನಗೊಳಿಸುವಂತೆ 2014ರ ಏಪ್ರಿಲ್ 11ರಂದು ನಡೆದ ಸಿಂಡಿಕೇಟ್ ಸಭೆ ನಿರ್ಣಯ ಅಂಗೀಕರಿಸಿತ್ತು. ಆದರೆ ಈ ವಿಲೀನವನ್ನು ರದ್ದುಗೊಳಿಸಿದ್ದ ಸರ್ಕಾರ, ಅವರನ್ನು ಮರಳಿ ಮಾತೃ ಸಂಸ್ಥೆಗೆ (ಕನ್ನಡ ವಿಶ್ವವಿದ್ಯಾಲಯ) ಕಳುಹಿಸುವಂತೆ ಆದೇಶ ಹೊರಡಿಸಿತ್ತು.