<p><strong>ಬೆಂಗಳೂರು:</strong> ನಗರದಲ್ಲಿ ಉಪನಗರ ರೈಲು ಯೋಜನೆ ಜಾರಿಗೊಳಿಸುವಾಗ 26 ಹೊಸ ಮೆಮು ರೈಲುಗಳನ್ನು ಖರೀದಿಸಲು ಹಾಗೂ ಯಶವಂತಪುರ– ಚನ್ನಸಂದ್ರ ಮತ್ತು ಬೈಯಪ್ಪನಹಳ್ಳಿ– ಹೊಸೂರು ಮಾರ್ಗಗಳಲ್ಲಿ ಜೋಡಿಹಳಿ ಅಳವಡಿಸಲು ರಾಜ್ಯ ಸರ್ಕಾರ ಆದ್ಯತೆ ನೀಡಲಿದೆ.</p>.<p>ಉಪನಗರ ರೈಲು ಯೋಜನೆಯ ಎಲ್ಲ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಿರ್ವಹಿಸುವ ಸಲುವಾಗಿ ವಿಶೇಷ ಉದ್ದೇಶದ ಘಟಕ (ಎಸ್ಪಿವಿ) ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ನಗರ ಭೂಸಾರಿಗೆ ನಿರ್ದೇಶನಾಲಯವು (ಡಲ್ಟ್ ) 2017ರ ಜುಲೈನಲ್ಲೇ ಎಸ್ಪಿವಿಯ ಕರಡನ್ನು ಸಿದ್ಧಪಡಿಸಿತ್ತು. ಸಮಗ್ರ ಯೋಜನೆ ಜಾರಿಗೊಳಿಸುವಾಗ ಯಾವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂಬ ಬಗ್ಗೆ ಮಾಹಿತಿ ನೀಡುವಂತೆ ಕೋರಿ ರೈಲ್ವೆ ಇಲಾಖೆ ಡಲ್ಟ್ಗೆ ಪತ್ರ ಬರೆದಿತ್ತು.</p>.<p>ಈ ಯೋಜನೆಗೆ ₹ 349 ಕೋಟಿ ಹೂಡಿಕೆ ಮಾಡಲು ರಾಜ್ಯ ಸಚಿವ ಸಂಪುಟವು ಈಗಾಗಲೇ ಮಂಜೂರಾತಿ ನೀಡಿದೆ. ಸಾಂಪ್ರದಾಯಿಕ ರೈಲುಗಳನ್ನು ಮೇಲ್ದರ್ಜೆಗೇರಿಸಲು ಪ್ರತ್ಯೇಕ ₹ 345 ಕೋಟಿ ಅನುದಾನ ಒದಗಿಸುವ ಪ್ರಸ್ತಾವಕ್ಕೂ ಸಮ್ಮತಿ ದೊರಕಿದೆ. ಕಾಮಗಾರಿ ಅನುಷ್ಠಾನಕ್ಕಾಗಿ ಎಸ್ಪಿವಿ ರಚಿಸಿದ ಬಳಿಕ ಅದರಲ್ಲಿ ರಾಜ್ಯದ ಪಾಲು ಭರಿಸುವುದಕ್ಕೂ ಸಂಪುಟ ಒಪ್ಪಿಗೆ ಸೂಚಿಸಿದೆ. ಮೊದಲ ಹಂತದಲ್ಲಿ ₹ 1,745 ಕೋಟಿ ವೆಚ್ಚದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಡಲ್ಟ್ ಆಯುಕ್ತ ದರ್ಪಣ್ ಜೈನ್ ತಿಳಿಸಿದರು.</p>.<p>ಉಪನಗರ ರೈಲು ಅಭಿವೃದ್ಧಿಪಡಿಸುವ ₹ 17,000 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ. ಇದರೊಂದಿಗೆ ರಾಜ್ಯದ ಹೂಡಿಕೆ ಪ್ರಸ್ತಾವಗಳಿಗೂ ಸಮ್ಮತಿಯ ಮುದ್ರೆ ಸಿಕ್ಕಿದಂತಾಗಿದೆ. ಆದರೆ ಈ ಯೋಜನೆಯಲ್ಲಿ ಏನೆಲ್ಲ ಕಾಮಗಾರಿಗಳು ಅಡಕವಾಗಿವೆ ಎಂಬ ಬಗ್ಗೆ ರಾಜ್ಯಸರ್ಕಾರದ ಅಧಿಕಾರಿಗಳಿಗೆ ಸ್ಪಷ್ಟ ಮಾಹಿತಿ ಇನ್ನೂ ಸಿಕ್ಕಿಲ್ಲ.</p>.<p>ರಾಜ್ಯ ಸರ್ಕಾರ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆ ಹಾಗೂ ಕೇಂದ್ರ ಅನುಷ್ಠಾನಗೊಳಿಸಲು ಮುಂದಾಗಿರುವ ಯೋಜನೆಗಳ ನಡುವೆ ಯಾವ ತರಹದ ಸಮನ್ವಯ ಇರಲಿದೆ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>58 ಹೊಸ ರೈಲು ಸೇವೆ ಆರಂಭಿಸುವುದು ಹಾಗೂ ರೈಲು ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸುವುದು ನಮ್ಮ ಆದ್ಯತೆ. ಇದರಿಂದ ಈಗಿರುವ ಸಬ್ ಅರ್ಬನ್ ರೈಲು ಜಾಲ ದ್ವಿಗುಣಗೊಳ್ಳಲಿದೆ. 2 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ದರ್ಪಣ್ ಜೈನ್ ತಿಳಿಸಿದರು.</p>.<p>ಕೇಂದ್ರ ಸರ್ಕಾರವು ಕಳೆದ ವರ್ಷ ಬಿಡುಗಡೆ ಮಾಡಿದ್ದ ಹೊಸ ಸಬ್ಅರ್ಬನ್ ರೈಲು ನೀತಿಯ ಪ್ರಕಾರ ಒಟ್ಟು ಯೋಜನಾ ವೆಚ್ಚದಲ್ಲಿ ಶೇ 80ರಷ್ಟು ಅನುದಾನ ಹೊಂದಿಸುವ ಹೊಣೆ ರಾಜ್ಯ ಸರ್ಕಾರದ ಮೇಲಿದೆ. ಕೇಂದ್ರ ಸರ್ಕಾರ ಕೇವಲ ಶೇ 20ರಷ್ಟು ಹೂಡಿಕೆ ಮಾಡಲಿದೆ.</p>.<p>ಕೇಂದ್ರ ಸರ್ಕಾರ ಯೋಜನೆಯ ಶೇ 50ರಷ್ಟು ಪಾಲನ್ನು ಭರಿಸಬೇಕು ಎಂದು ರಾಜ್ಯ ಸರ್ಕಾರ ಒತ್ತಾಯಿಸಿತ್ತು. ಇದಕ್ಕೆ ರೈಲ್ವೆ ಸಚಿವ ಪೀಯೂಷ್ ಗೋಯಲ್ ಕಳೆದ ತಿಂಗಳು ಒಪ್ಪಿಗೆ ಸೂಚಿಸಿದ್ದರು.</p>.<p>‘ಈ ಯೋಜನೆಯಲ್ಲಿ ರಾಜ್ಯ ಸರ್ಕಾರ ಎಷ್ಟು ಪಾಲು ಭರಿಸಬೇಕು ಎಂಬ ಬಗ್ಗೆ ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ’ ಎಂದು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಉಪನಗರ ರೈಲು ಯೋಜನೆ ಜಾರಿಗೊಳಿಸುವಾಗ 26 ಹೊಸ ಮೆಮು ರೈಲುಗಳನ್ನು ಖರೀದಿಸಲು ಹಾಗೂ ಯಶವಂತಪುರ– ಚನ್ನಸಂದ್ರ ಮತ್ತು ಬೈಯಪ್ಪನಹಳ್ಳಿ– ಹೊಸೂರು ಮಾರ್ಗಗಳಲ್ಲಿ ಜೋಡಿಹಳಿ ಅಳವಡಿಸಲು ರಾಜ್ಯ ಸರ್ಕಾರ ಆದ್ಯತೆ ನೀಡಲಿದೆ.</p>.<p>ಉಪನಗರ ರೈಲು ಯೋಜನೆಯ ಎಲ್ಲ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಿರ್ವಹಿಸುವ ಸಲುವಾಗಿ ವಿಶೇಷ ಉದ್ದೇಶದ ಘಟಕ (ಎಸ್ಪಿವಿ) ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ನಗರ ಭೂಸಾರಿಗೆ ನಿರ್ದೇಶನಾಲಯವು (ಡಲ್ಟ್ ) 2017ರ ಜುಲೈನಲ್ಲೇ ಎಸ್ಪಿವಿಯ ಕರಡನ್ನು ಸಿದ್ಧಪಡಿಸಿತ್ತು. ಸಮಗ್ರ ಯೋಜನೆ ಜಾರಿಗೊಳಿಸುವಾಗ ಯಾವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂಬ ಬಗ್ಗೆ ಮಾಹಿತಿ ನೀಡುವಂತೆ ಕೋರಿ ರೈಲ್ವೆ ಇಲಾಖೆ ಡಲ್ಟ್ಗೆ ಪತ್ರ ಬರೆದಿತ್ತು.</p>.<p>ಈ ಯೋಜನೆಗೆ ₹ 349 ಕೋಟಿ ಹೂಡಿಕೆ ಮಾಡಲು ರಾಜ್ಯ ಸಚಿವ ಸಂಪುಟವು ಈಗಾಗಲೇ ಮಂಜೂರಾತಿ ನೀಡಿದೆ. ಸಾಂಪ್ರದಾಯಿಕ ರೈಲುಗಳನ್ನು ಮೇಲ್ದರ್ಜೆಗೇರಿಸಲು ಪ್ರತ್ಯೇಕ ₹ 345 ಕೋಟಿ ಅನುದಾನ ಒದಗಿಸುವ ಪ್ರಸ್ತಾವಕ್ಕೂ ಸಮ್ಮತಿ ದೊರಕಿದೆ. ಕಾಮಗಾರಿ ಅನುಷ್ಠಾನಕ್ಕಾಗಿ ಎಸ್ಪಿವಿ ರಚಿಸಿದ ಬಳಿಕ ಅದರಲ್ಲಿ ರಾಜ್ಯದ ಪಾಲು ಭರಿಸುವುದಕ್ಕೂ ಸಂಪುಟ ಒಪ್ಪಿಗೆ ಸೂಚಿಸಿದೆ. ಮೊದಲ ಹಂತದಲ್ಲಿ ₹ 1,745 ಕೋಟಿ ವೆಚ್ಚದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಡಲ್ಟ್ ಆಯುಕ್ತ ದರ್ಪಣ್ ಜೈನ್ ತಿಳಿಸಿದರು.</p>.<p>ಉಪನಗರ ರೈಲು ಅಭಿವೃದ್ಧಿಪಡಿಸುವ ₹ 17,000 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ. ಇದರೊಂದಿಗೆ ರಾಜ್ಯದ ಹೂಡಿಕೆ ಪ್ರಸ್ತಾವಗಳಿಗೂ ಸಮ್ಮತಿಯ ಮುದ್ರೆ ಸಿಕ್ಕಿದಂತಾಗಿದೆ. ಆದರೆ ಈ ಯೋಜನೆಯಲ್ಲಿ ಏನೆಲ್ಲ ಕಾಮಗಾರಿಗಳು ಅಡಕವಾಗಿವೆ ಎಂಬ ಬಗ್ಗೆ ರಾಜ್ಯಸರ್ಕಾರದ ಅಧಿಕಾರಿಗಳಿಗೆ ಸ್ಪಷ್ಟ ಮಾಹಿತಿ ಇನ್ನೂ ಸಿಕ್ಕಿಲ್ಲ.</p>.<p>ರಾಜ್ಯ ಸರ್ಕಾರ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆ ಹಾಗೂ ಕೇಂದ್ರ ಅನುಷ್ಠಾನಗೊಳಿಸಲು ಮುಂದಾಗಿರುವ ಯೋಜನೆಗಳ ನಡುವೆ ಯಾವ ತರಹದ ಸಮನ್ವಯ ಇರಲಿದೆ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>58 ಹೊಸ ರೈಲು ಸೇವೆ ಆರಂಭಿಸುವುದು ಹಾಗೂ ರೈಲು ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸುವುದು ನಮ್ಮ ಆದ್ಯತೆ. ಇದರಿಂದ ಈಗಿರುವ ಸಬ್ ಅರ್ಬನ್ ರೈಲು ಜಾಲ ದ್ವಿಗುಣಗೊಳ್ಳಲಿದೆ. 2 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ದರ್ಪಣ್ ಜೈನ್ ತಿಳಿಸಿದರು.</p>.<p>ಕೇಂದ್ರ ಸರ್ಕಾರವು ಕಳೆದ ವರ್ಷ ಬಿಡುಗಡೆ ಮಾಡಿದ್ದ ಹೊಸ ಸಬ್ಅರ್ಬನ್ ರೈಲು ನೀತಿಯ ಪ್ರಕಾರ ಒಟ್ಟು ಯೋಜನಾ ವೆಚ್ಚದಲ್ಲಿ ಶೇ 80ರಷ್ಟು ಅನುದಾನ ಹೊಂದಿಸುವ ಹೊಣೆ ರಾಜ್ಯ ಸರ್ಕಾರದ ಮೇಲಿದೆ. ಕೇಂದ್ರ ಸರ್ಕಾರ ಕೇವಲ ಶೇ 20ರಷ್ಟು ಹೂಡಿಕೆ ಮಾಡಲಿದೆ.</p>.<p>ಕೇಂದ್ರ ಸರ್ಕಾರ ಯೋಜನೆಯ ಶೇ 50ರಷ್ಟು ಪಾಲನ್ನು ಭರಿಸಬೇಕು ಎಂದು ರಾಜ್ಯ ಸರ್ಕಾರ ಒತ್ತಾಯಿಸಿತ್ತು. ಇದಕ್ಕೆ ರೈಲ್ವೆ ಸಚಿವ ಪೀಯೂಷ್ ಗೋಯಲ್ ಕಳೆದ ತಿಂಗಳು ಒಪ್ಪಿಗೆ ಸೂಚಿಸಿದ್ದರು.</p>.<p>‘ಈ ಯೋಜನೆಯಲ್ಲಿ ರಾಜ್ಯ ಸರ್ಕಾರ ಎಷ್ಟು ಪಾಲು ಭರಿಸಬೇಕು ಎಂಬ ಬಗ್ಗೆ ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ’ ಎಂದು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>