<p><strong>ಲಖನೌ:</strong> ಉತ್ತರ ಪ್ರದೇಶದ ವಿವಿಧೆಡೆ ಕಳೆದ ಎರಡು ದಿನಗಳ ಅವಧಿಯಲ್ಲಿ 15 ಎನ್ಕೌಂಟರ್ಗಳು ನಡೆದಿದ್ದು, ಒಬ್ಬ ಗ್ಯಾಂಗ್ಸ್ಟರ್ನನ್ನು ಹತ್ಯೆ ಮಾಡಲಾಗಿದೆ. ಅಪರಾಧ ಪ್ರಕರಣಗಳಲ್ಲಿ ಬೇಕಾಗಿರುವ 24 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p>.<p>ನಗ್ಲಖೆಪಾಡ್ನಲ್ಲಿ ವಿಶೇಷ ಕಾರ್ಯಪಡೆ ನಡೆಸಿದ ಎನ್ಕೌಂಟರ್ನಲ್ಲಿ ಹತ್ಯೆಯಾದ ಗ್ಯಾಂಗ್ಸ್ಟರ್ನನ್ನು ಇಂದ್ರಪಾಲ್ ಎಂದು ಗುರುತಿಸಲಾಗಿದೆ. ಈತನ ಪತ್ತೆಗೆ ಪೊಲೀಸ್ ಇಲಾಖೆ ₹ 25,000 ಇನಾಮು ಘೋಷಿಸಿತ್ತು. ಇಂದ್ರಪಾಲ್ ಸುಮಾರು 30ರಷ್ಟು ಪ್ರಕರಣಗಳಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪೊಲೀಸರಿಗೆ ಬೇಕಾಗಿದ್ದ ಎಂದು ವಿಶೇಷ ಕಾರ್ಯಪಡೆಯ ಪೊಲೀಸ್ ಅಧೀಕ್ಷಕ ರಾಜೀವ್ ನಾರಾಯಣನ್ ತಿಳಿಸಿದ್ದಾರೆ.</p>.<p>ರಾಜ್ಯದ 10 ಜಿಲ್ಲೆಗಳಲ್ಲಿ 48 ಗಂಟೆಗಳ ಅವಧಿಯಲ್ಲಿ ನಡೆದ 15 ಎನ್ಕೌಂಟರ್ಗಳಲ್ಲಿ ಒಬ್ಬ ಗ್ಯಾಂಗ್ಸ್ಟರ್ನನ್ನು ಹತ್ಯೆ ಮಾಡಲಾಗಿದ್ದು, ವಿವಿಧ ಪ್ರಕರಣಗಳಲ್ಲಿ ಬೇಕಾಗಿರುವ 24 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರ ಹೇಳಿಕೆ ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p>ಶುಕ್ರವಾರ ಗೋರಖಪುರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇಬ್ಬರು ಶಂಕಿತ ಅಪರಾಧಿಗಳು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ವಿವಿಧೆಡೆ ಕಳೆದ ಎರಡು ದಿನಗಳ ಅವಧಿಯಲ್ಲಿ 15 ಎನ್ಕೌಂಟರ್ಗಳು ನಡೆದಿದ್ದು, ಒಬ್ಬ ಗ್ಯಾಂಗ್ಸ್ಟರ್ನನ್ನು ಹತ್ಯೆ ಮಾಡಲಾಗಿದೆ. ಅಪರಾಧ ಪ್ರಕರಣಗಳಲ್ಲಿ ಬೇಕಾಗಿರುವ 24 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p>.<p>ನಗ್ಲಖೆಪಾಡ್ನಲ್ಲಿ ವಿಶೇಷ ಕಾರ್ಯಪಡೆ ನಡೆಸಿದ ಎನ್ಕೌಂಟರ್ನಲ್ಲಿ ಹತ್ಯೆಯಾದ ಗ್ಯಾಂಗ್ಸ್ಟರ್ನನ್ನು ಇಂದ್ರಪಾಲ್ ಎಂದು ಗುರುತಿಸಲಾಗಿದೆ. ಈತನ ಪತ್ತೆಗೆ ಪೊಲೀಸ್ ಇಲಾಖೆ ₹ 25,000 ಇನಾಮು ಘೋಷಿಸಿತ್ತು. ಇಂದ್ರಪಾಲ್ ಸುಮಾರು 30ರಷ್ಟು ಪ್ರಕರಣಗಳಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪೊಲೀಸರಿಗೆ ಬೇಕಾಗಿದ್ದ ಎಂದು ವಿಶೇಷ ಕಾರ್ಯಪಡೆಯ ಪೊಲೀಸ್ ಅಧೀಕ್ಷಕ ರಾಜೀವ್ ನಾರಾಯಣನ್ ತಿಳಿಸಿದ್ದಾರೆ.</p>.<p>ರಾಜ್ಯದ 10 ಜಿಲ್ಲೆಗಳಲ್ಲಿ 48 ಗಂಟೆಗಳ ಅವಧಿಯಲ್ಲಿ ನಡೆದ 15 ಎನ್ಕೌಂಟರ್ಗಳಲ್ಲಿ ಒಬ್ಬ ಗ್ಯಾಂಗ್ಸ್ಟರ್ನನ್ನು ಹತ್ಯೆ ಮಾಡಲಾಗಿದ್ದು, ವಿವಿಧ ಪ್ರಕರಣಗಳಲ್ಲಿ ಬೇಕಾಗಿರುವ 24 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರ ಹೇಳಿಕೆ ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p>ಶುಕ್ರವಾರ ಗೋರಖಪುರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇಬ್ಬರು ಶಂಕಿತ ಅಪರಾಧಿಗಳು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>