ರಿಜ್ವಿ ಅವರು ಶುಕ್ರವಾರ ಅಯೋಧ್ಯೆಯ ವಿವಾದಿತ ಜಾಗದಲ್ಲಿ ಪ್ರಾರ್ಥನೆ ಆಯೋಜಿಸಿದ್ದರು. ರಾಮ ಜನ್ಮಭೂಮಿಯ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರನ್ನು ಭೇಟಿ ಮಾಡಿದ್ದರು. ಅಲ್ಲಿ ಮಾತನಾಡಿದ ಅವರು, ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಿಸುವುದನ್ನು ವಿರೋಧಿಸುವ ಮತ್ತು ಬಾಬ್ರಿ ಮಸೀದಿ ನಿರ್ಮಾಣ ಮಾಡಬೇಕು ಎಂದು ಬಯಸುವ ಮೂಲಭೂತವಾದಿ ಮನಸ್ಥಿತಿ ಇರುವವರು ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೋಗಬೇಕು. ಅಂಥ ಮುಸ್ಲಿಮರಿಗೆ ಭಾರತದಲ್ಲಿ ಜಾಗ ಇಲ್ಲ ಎಂದು ಹೇಳಿದ್ದಾರೆ.