‘ಈ ಸಾವು ಅನುಮಾನಾಸ್ಪದವಾಗಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವಂತೆ ರಾಜ್ಯ ಗೃಹ ಇಲಾಖೆಗೆ ಎರಡು ಬಾರಿ ಪತ್ರ ಬರೆದು ಕೋರಿದ್ದೆವು. ಆದರೆ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ. ಸ್ಥಳೀಯ ಪೊಲೀಸರು ಆಳ್ವಾಸ್ ಸಂಸ್ಥೆಯ ಜತೆ ಶಾಮೀಲಾಗಿದ್ದಾರೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಲು ಕ್ರಮಕೈಗೊಳ್ಳಬೇಕು’ ಎಂದು ನಗರದ ಮಾನವ ಹಕ್ಕು ಹೋರಾಟಗಾರ ಎಸ್.ಸಾದಿಕ್ ಪಾಷಾ ಅವರು ರಾಷ್ಟೀಯ ಮಾನವ ಹಕ್ಕುಗಳ ಆಯೋಗ ಮತ್ತು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು.