‘ಚುನಾವಣೆ ನಮ್ಮ ಹೊಣೆ; ಜನತಂತ್ರದೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮದಡಿ ಫೆ.24ರಿಂದ ಮಾ.2ರವರೆಗೆ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮತದಾರರ ಜಾಗೃತಿ ಜಾಥಾ ಹಾಗೂ ಸಮಾವೇಶ ನಡೆಯಲಿದೆ. ರೈತರ ಸಮಸ್ಯೆ, ಭ್ರಷ್ಟಾಚಾರ, ನಿರುದ್ಯೋಗ, ಆರೋಗ್ಯ ಮತ್ತು ಶಿಕ್ಷಣದ ಖಾಸಗೀಕರಣ ಈ ನಾಲ್ಕು ಸಮಸ್ಯೆಗಳ ಕುರಿತು ಜಾಥಾದಲ್ಲಿ ಗಮನ ಸೆಳೆಯಲಾಗುವುದು ಹಾಗೂ ಜೆಡಿಎಸ್, ಕಾಂಗ್ರೆಸ್, ಬಿಜೆಪಿ (ಜೆಸಿಬಿ) ಪಕ್ಷಗಳನ್ನು ತಿರಸ್ಕರಿಸುವಂತೆ ಈ ವೇಳೆ ಮತದಾರರಲ್ಲಿ ಮನವಿ ಮಾಡಲಾಗುವುದು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.