ಅದಕ್ಕೆ ಆತ, ‘ಏನೋ ಗುರಾಯಿಸುತ್ತಿದ್ದೀಯಾ’ ಎಂದು ಗಲಾಟೆ ಪ್ರಾರಂಭಿಸಿದ್ದಾನೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಆಗ ಬಾರ್ ನೌಕರರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದಾರೆ. ಆದರೆ, 12.30ರ ಸುಮಾರಿಗೆ ಬಾರ್ನ ಹೊರಗಡೆ ಮತ್ತೆ ಅವರ ಮಧ್ಯೆ ಗಲಾಟೆ ಶುರುವಾಗಿದೆ. ಈ ಹಂತದಲ್ಲಿ ಅರುಣ್ ಎದೆಗೆ ಚಾಕುವಿನಿಂದ ಇರಿದ ಆರೋಪಿಗಳು, ಧಿಲಾನ್ ಮೇಲೂ ಹಲ್ಲೆ ಮಾಡಿ ಹೋಗಿದ್ದಾರೆ.