<p><strong>ಬೆಂಗಳೂರು:</strong> ಆರ್ಯ ವೈಶ್ಯ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ಪಡೆಯಲು ತೊಡಕಾಗಿರುವ ಸಮಸ್ಯೆ ಬಗೆಹರಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ನಡೆದ ಆರ್ಯ ವೈಶ್ಯ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಆರ್ಯ ವೈಶ್ಯ ಜಾತಿ ಹೆಸರನ್ನು ವೈಶ್ಯ ಎಂದು ಮಾತ್ರ ನಮೂದಿಸಲಾಗುತ್ತಿದೆ. ಇದರ ಬದಲು ಆರ್ಯ ವೈಶ್ಯ ಎಂದು ನಮೂದಿಸಬೇಕು ಎಂದು ಹಲವು ಮನವಿಗಳು ಬಂದಿವೆ. ಈ ಕುರಿತು ಸೂಕ್ತ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ’ ಎಂದರು.</p>.<p>‘ವಾಸವಿ ಅಕಾಡೆಮಿಗೆ ಅನುದಾನ ಮತ್ತು ಜಾಗ ನೀಡಬೇಕು ಎಂದೂ ಆರ್ಯ ವೈಶ್ಯ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ. ಈ ಬೇಡಿಕೆಯನ್ನೂ ಈಡೇರಿಸುತ್ತೇನೆ’ ಎಂದು ಮುಖ್ಯಮಂತ್ರಿ ಆಶ್ವಾಸನೆ ನೀಡಿದರು.</p>.<p>‘ನಾಲ್ಕು ಚತುವರ್ಣಗಳಲ್ಲಿ ಲಕ್ಷ್ಮಿ ಒಲಿದಿರುವುದು ಆರ್ಯ ವೈಶ್ಯರಿಗೆ ಮಾತ್ರ. ಹಾಗೆಂದು, ಈ ಸಮುದಾಯದ ಎಲ್ಲರೂ ಶ್ರೀಮಂತರು ಎಂದಲ್ಲ. ಹೆಚ್ಚಿನ ಜನ ಮಧ್ಯಮ ವರ್ಗದವರು. ಯಾರೊಂದಿಗೂ ದ್ವೇಷ ಸಾಧಿಸದೆ ಎಲ್ಲರನ್ನೂ ಪ್ರೀತಿಯಿಂದ ಕಾಣುವ ಗುಣ ಆರ್ಯ ವೈಶ್ಯರಲ್ಲಿದೆ’ ಎಂದು ಬಣ್ಣಿಸಿದರು.</p>.<p>‘ಮಹಾತ್ಮ ಗಾಂಧಿ ಮತ್ತು ರಾಮ್ ಮನೋಹರ್ ಲೋಹಿಯಾ ಅವರಂಥ ಎರಡು ನಕ್ಷತ್ರಗಳನ್ನು ಈ ಸಮಾಜ ದೇಶಕ್ಕೆ ನೀಡಿದೆ. ದೇಶದ ಅಭಿವೃದ್ಧಿಯಲ್ಲಿ ಈ ಇಬ್ಬರು ಮಹಾ ನಾಯಕರ ಹೋರಾಟ ಅವಿಸ್ಮರಣೀಯ’ ಎಂದರು.</p>.<p>ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರ ಮೂರ್ತಿ, ಶಾಸಕ ಎಚ್.ಪಿ. ಮಂಜುನಾಥ್, ಆರ್ಯ ವೈಶ್ಯ ಮಹಾಸಭಾ ಅಧ್ಯಕ್ಷ ಪಿ. ರವಿಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರ್ಯ ವೈಶ್ಯ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ಪಡೆಯಲು ತೊಡಕಾಗಿರುವ ಸಮಸ್ಯೆ ಬಗೆಹರಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ನಡೆದ ಆರ್ಯ ವೈಶ್ಯ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಆರ್ಯ ವೈಶ್ಯ ಜಾತಿ ಹೆಸರನ್ನು ವೈಶ್ಯ ಎಂದು ಮಾತ್ರ ನಮೂದಿಸಲಾಗುತ್ತಿದೆ. ಇದರ ಬದಲು ಆರ್ಯ ವೈಶ್ಯ ಎಂದು ನಮೂದಿಸಬೇಕು ಎಂದು ಹಲವು ಮನವಿಗಳು ಬಂದಿವೆ. ಈ ಕುರಿತು ಸೂಕ್ತ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ’ ಎಂದರು.</p>.<p>‘ವಾಸವಿ ಅಕಾಡೆಮಿಗೆ ಅನುದಾನ ಮತ್ತು ಜಾಗ ನೀಡಬೇಕು ಎಂದೂ ಆರ್ಯ ವೈಶ್ಯ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ. ಈ ಬೇಡಿಕೆಯನ್ನೂ ಈಡೇರಿಸುತ್ತೇನೆ’ ಎಂದು ಮುಖ್ಯಮಂತ್ರಿ ಆಶ್ವಾಸನೆ ನೀಡಿದರು.</p>.<p>‘ನಾಲ್ಕು ಚತುವರ್ಣಗಳಲ್ಲಿ ಲಕ್ಷ್ಮಿ ಒಲಿದಿರುವುದು ಆರ್ಯ ವೈಶ್ಯರಿಗೆ ಮಾತ್ರ. ಹಾಗೆಂದು, ಈ ಸಮುದಾಯದ ಎಲ್ಲರೂ ಶ್ರೀಮಂತರು ಎಂದಲ್ಲ. ಹೆಚ್ಚಿನ ಜನ ಮಧ್ಯಮ ವರ್ಗದವರು. ಯಾರೊಂದಿಗೂ ದ್ವೇಷ ಸಾಧಿಸದೆ ಎಲ್ಲರನ್ನೂ ಪ್ರೀತಿಯಿಂದ ಕಾಣುವ ಗುಣ ಆರ್ಯ ವೈಶ್ಯರಲ್ಲಿದೆ’ ಎಂದು ಬಣ್ಣಿಸಿದರು.</p>.<p>‘ಮಹಾತ್ಮ ಗಾಂಧಿ ಮತ್ತು ರಾಮ್ ಮನೋಹರ್ ಲೋಹಿಯಾ ಅವರಂಥ ಎರಡು ನಕ್ಷತ್ರಗಳನ್ನು ಈ ಸಮಾಜ ದೇಶಕ್ಕೆ ನೀಡಿದೆ. ದೇಶದ ಅಭಿವೃದ್ಧಿಯಲ್ಲಿ ಈ ಇಬ್ಬರು ಮಹಾ ನಾಯಕರ ಹೋರಾಟ ಅವಿಸ್ಮರಣೀಯ’ ಎಂದರು.</p>.<p>ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರ ಮೂರ್ತಿ, ಶಾಸಕ ಎಚ್.ಪಿ. ಮಂಜುನಾಥ್, ಆರ್ಯ ವೈಶ್ಯ ಮಹಾಸಭಾ ಅಧ್ಯಕ್ಷ ಪಿ. ರವಿಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>