ನಗರದಲ್ಲಿ ಆಯೋಜಿಸಿರುವ ಯೋಗ ಶಿಬಿರದಲ್ಲಿ ಮಾತನಾಡಿದ ಅವರು, ‘ವೈಜ್ಞಾನಿಕ ಮತ್ತು ಜಾತ್ಯತೀತ ತತ್ವದಡಿ, ಯೋಗವನ್ನು ಒಂದು ಚಿಕಿತ್ಸೆ ರೂಪದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದಕ್ಕೆ ಯಾವುದೇ ಜಾತಿ, ಧರ್ಮ ಅಥವಾ ರಾಜಕೀಯದ ಲೇಪನ ಇಲ್ಲ. ಎಲ್ಲರಿಗೂ ಮುಕ್ತ ಅವಕಾಶವಿದೆ. ಪ್ರತಿಯೊಬ್ಬರೂ ಯೋಗ ಸಂಸ್ಕೃತಿ ರೂಢಿಸಿಕೊಂಡು ಸದೃಢ ಭಾರತ ನಿರ್ಮಿಸಬೇಕು’ ಎಂದು ಸಲಹೆ ನೀಡಿದರು.