‘ಕೆರೆಗೆ ನೀರಿನ ಒಳಹರಿವು ಹಾಗೂ ಹೊರಹರಿವು ನಿಯಂತ್ರಿಸಲು ಜಾರು ಬಾಗಿಲು (ಸ್ಲೂಸ್ ಗೇಟ್) ಅಳವಡಿಸಲಾಗುತ್ತಿದೆ. ನೀರಿನಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಿಸಲು ಏರೇಟರ್ ಅಳವಡಿಸಲಾಗುತ್ತಿದೆ. ಕೆರೆಯ ಮೇಲ್ವಿಚಾರಣಾ ಸಮಿತಿ ಸರ್ಕಾರದ ಕಾರ್ಯವೈಖರಿ ಟೀಕಿಸಿದೆ. ಆದರೆ, ನಾವು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಗಮನ ವಹಿಸಬೇಕು’ ಎಂದು ಅವರು ಹೇಳಿದರು.