ಬೆಂಗಳೂರು: ಜಾನುವಾರು ಮೇವು ನಿಧಿಯಿಂದ ಹೆಸರಘಟ್ಟ ಹೋಬಳಿಗೆ ಕಳೆದ ವರ್ಷ ನೀಡಿದ್ದ ಮೇವು ಇಲ್ಲಿನ ತೋಟಗಾರಿಕೆ ಸಂಸ್ಥೆಯ ಅವರಣದಲ್ಲಿಯೇ ಕೊಳೆಯುತ್ತಿದೆ. 20 ಟನ್ ಮೆಕ್ಕೆಜೋಳದ ಕಡ್ಡಿಯನ್ನು ಹೋಬಳಿಗೆ ನೀಡಲಾಗಿತ್ತು. ಆದರೆ, ಇಲ್ಲಿನ ಪಶುಪಾಲನ ಇಲಾಖೆ ಅಧಿಕಾರಿಗಳು ಒಂದೆರಡು ಟನ್ನಷ್ಟು ಮೇವುಗಳನ್ನಷ್ಟೇ ವಿತರಿಸಿ, ಮರೆತು ಬಿಟ್ಟರು.