ಆಗ್ರಾ: ಮುಸ್ಲಿಮರ ಭದ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲ್ಲಿನ ಮುಸ್ಲಿಮರ ತಂಡವೊಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಪತ್ರ ಸಲ್ಲಿಸಿದೆ.
ಭದ್ರತೆಗೆ ಆಗ್ರಹಿಸಿ ಶಾಹಿದ್ ಸ್ಮಾರಕದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ‘ತಿರಂಗಾ ಯಾತ್ರೆ‘ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಕೈಬಿಡಲಾಗಿದೆ ಎಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾದ ನಿಯೋಗದಲ್ಲಿದ್ದ ಶಬಾನಾ ಖಂಡೇಲ್ವಾಲ್ ತಿಳಿಸಿದ್ದಾರೆ.
ಕಾಸ್ಗಂಜ್ ಗಲಭೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಕೊಲೆಯಾಗಿರುವ ಚಂದನ್ ಗುಪ್ತಾ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದೂ ಮನವಿ ಮಾಡಲಾಗಿದೆ.