ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ: ಇಂದಿನಿಂದ ಅಂತಿಮ ಹಂತದ ವಿಚಾರಣೆ

Last Updated 5 ಫೆಬ್ರುವರಿ 2018, 20:28 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಮಹದಾಯಿ ನದಿ ನೀರಿನ ಹಂಚಿಕೆ ಕುರಿತ ಪ್ರಕರಣದ ಅಂತಿಮ ಹಂತದ ವಿಚಾರಣೆಯು ಮಹದಾಯಿ ಜಲವಿವಾದ ನ್ಯಾಯಮಂಡಳಿಯಲ್ಲಿ ಮಂಗಳವಾರದಿಂದ ಆರಂಭವಾಗಲಿದೆ.

ಪ್ರಕರಣದ ವಿಚಾರಣೆ ನಡೆದಿರುವಾಗಲೇ ಕರ್ನಾಟಕ ಸರ್ಕಾರವು ಕಳಸಾ ನಾಲೆಯ ತಿರುವು ಯೋಜನೆಯನ್ನು ಅಕ್ರಮವಾಗಿ ಆರಂಭಿಸುವ ಮೂಲಕ ನ್ಯಾಯಮಂಡಳಿಯ ಈ ಹಿಂದಿನ ಆದೇಶಗಳನ್ನು ಉಲ್ಲಂಘಿಸಿದೆ ಎಂದು ದೂರಿ ಕಳೆದ ತಿಂಗಳು ಗೋವಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೋಮವಾರ ನ್ಯಾಯಮಂಡಳಿಗೆ ಉತ್ತರ ನೀಡಿದೆ.

ಜಲವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಪರ ವಾದ ಮಂಡಿಸಿರುವ ಹಿರಿಯ ವಕೀಲ ಫಾಲಿ ನಾರಿಮನ್‌ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದರಿಂದ ಅವರ ಬದಲಿಗೆ ಅಶೋಕ್‌ ದೇಸಾಯಿ ಹಾಗೂ ಇಂದಿರಾ ಜೈಸಿಂಗ್‌ ಅವರು ಅಂತಿಮ ಹಂತದ ವಿಚಾರಣೆಯ ವೇಳೆ ವಾದ ಮಂಡಿಸಲಿದ್ದಾರೆ.

ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್‌ ನೇತೃತ್ವದ ಪೀಠವು ಈಗಾಗಲೇ ಮೂರು ರಾಜ್ಯಗಳ ಸಾಕ್ಷ್ಯಗಳ ಪಾಟೀ ಸವಾಲು ಆಲಿಸಿದ್ದು, ಅಂತಿಮ ಹಂತದ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಆಗಸ್ಟ್‌ ಒಳಗಾಗಿ ಐತೀರ್ಪು ಪ್ರಕಟಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT