ಕಾಸ್ಗಂಜ್: ಇಲ್ಲಿನ ಪ್ರಾರ್ಥನಾ ಮಂದಿರದ ದ್ವಾರಕ್ಕೆ ದುಷ್ಕರ್ಮಿಗಳು ಸೋಮವಾರ ಬೆಂಕಿ ಹಚ್ಚಿದ್ದರಿಂದಾಗಿ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ, ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಕಿಯನ್ನು ನಂದಿಸಿದರು.
ಗಣರಾಜ್ಯೋತ್ಸವದಂದು ಮಥುರಾ –ಬರೇಲಿ ಹೆದ್ದಾರಿಯಲ್ಲಿ ಆಯೋಜಿಸಿದ್ದ ಬೈಕ್ ರ್ಯಾಲಿ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಒಬ್ಬ ವ್ಯಕ್ತಿ ಮೃತಪಟ್ಟಿದ್ದರು.