<p><strong>ಇಸ್ಲಾಮಾಬಾದ್: </strong>ಕಾಶ್ಮೀರ ಸಮಸ್ಯೆ ಬಗೆಹರಿಯದೆ ಪ್ರಾದೇಶಿಕವಾಗಿ ಶಾಂತಿ ಮತ್ತು ಸಮೃದ್ಧಿ ನೆಲಸಬೇಕು ಎನ್ನುವ ಕನಸು ಈಡೇರುವುದು ಕಷ್ಟ ಎಂದು ಪಾಕಿಸ್ತಾನ ಸೋಮವಾರ ಹೇಳಿದೆ.</p>.<p>ಕಾಶ್ಮೀರ ಏಕತಾ ದಿನ ಆಚರಣೆ ವೇಳೆ ಈ ವಿಷಯ ಕುರಿತು ಪಾಕಿಸ್ತಾನ ಅಧ್ಯಕ್ಷ ಮಮ್ನೂನ್ ಹುಸೇನ್ ಹಾಗೂ ಪ್ರಧಾನಿ ಶಾಹಿದ್ ಖಕಾನ್ ಅಬ್ಬಾಸಿ ಅವರು ಪ್ರತ್ಯೇಕವಾಗಿ ಹೇಳಿಕೆ ನೀಡಿದ್ದಾರೆ.</p>.<p>ಕಾಶ್ಮೀರವು ಪಾಕಿಸ್ತಾನದ ಭಾಗವಾಗಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್ ಟ್ವೀಟ್ ಮಾಡಿದ್ದಾರೆ.</p>.<p>‘ವಿಶ್ವಸಂಸ್ಥೆಯ ನಿರ್ಣಯಗಳಿಗೆ ಅನುಸಾರವಾಗಿ ಕಣಿವೆಯ ಜನರು ತಮ್ಮ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ರಾಜಕೀಯ, ನೈತಿಕ ಹಾಗೂ ರಾಜತಾಂತ್ರಿಕ ಬೆಂಬಲ ನೀಡುವುದಾಗಿ ಪಾಕಿಸ್ತಾನ ಪುನರುಚ್ಚರಿಸುತ್ತದೆ’ ಎಂದು ಅಧ್ಯಕ್ಷ ಹುಸೇನ್ ಅವರು ತಿಳಿಸಿದ್ದಾರೆ.</p>.<p>‘ವಿಶ್ವಸಂಸ್ಥೆಯ ನಿರ್ಣಯಗಳು ಅಂಗೀಕಾರವಾಗಿ ಏಳು ದಶಕಗಳು ಕಳೆದರೂ ಕಾಶ್ಮೀರದ ಜನತೆ ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ’ ಎಂದು ಪ್ರಧಾನಿ ಅಬ್ಬಾಸಿ ಹೇಳಿದ್ದಾರೆ.</p>.<p>ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿ ಹಾಗೂ ಕಾಶ್ಮೀರದ ಮುಸ್ಲಿಂ ಒಕ್ಕೂಟದ ಮಾನವ ಹಕ್ಕುಗಳ ಕಾಯಂ ನಿಯೋಗದ ಸದಸ್ಯರು ಕಾಶ್ಮೀರಕ್ಕೆ ಭೇಟಿ ನೀಡಲು ಭಾರತದ ಪ್ರಧಾನಿ ಅವಕಾಶ ನೀಡಲಿಲ್ಲ. ಈ ಮೂಲಕ ಕಾಶ್ಮೀರದ ಪರಿಸ್ಥಿತಿಯನ್ನು ಅರಿಯಲು ಅಂತರರಾಷ್ಟ್ರೀಯ ಸಮುದಾಯಕ್ಕೆ ಅವಕಾಶ ನಿರಾಕರಿಸಲಾಯಿತು ಎಂದು ಅವರು ಹೇಳಿದ್ದಾರೆ.</p>.<p>ಪಾಕಿಸ್ತಾನ ಸೋಮವಾರ ಅಧಿಕೃತ ರಜೆ ಘೋಷಿಸಿತ್ತು.</p>.<p>ಕಾಶ್ಮೀರ ಸಮಸ್ಯೆ ಕುರಿತು ಗಮನ ಸೆಳೆಯಲು ಸರ್ಕಾರ ಮತ್ತು ವಿವಿಧ ಸಂಸ್ಥೆಗಳು ರ್ಯಾಲಿ ಆಯೋಜಿಸಿದ್ದವು.</p>.<p>**</p>.<p><strong>‘ಸಿಪಿಇಸಿ ಮೇಲೆ ಭಾರತ ದಾಳಿ ಶಂಕೆ’</strong></p>.<p><strong>ಇಸ್ಲಾಮಾಬಾದ್: </strong>ಬಹುಕೋಟಿ ವೆಚ್ಚದ ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಮಾರ್ಗದ ಮೇಲೆ ಭಾರತ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಶಂಕೆ ವ್ಯಕ್ತಪಡಿಸಿದ್ದಾಗಿ ‘ಡಾನ್’ ಪತ್ರಿಕೆ ವರದಿ ಮಾಡಿದೆ.</p>.<p>ಕರಕೋರಂ ಹೆದ್ದಾರಿ ಮೇಲೆ ಭಾರತ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗಿಲ್ಗಿಟ್–ಬಾಲ್ಟಿಸ್ತಾನ ಗೃಹ ಇಲಾಖೆಗೆ ಸಚಿವಾಲಯ ಪತ್ರ ಬರೆದಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲು ಸಂಪೂರ್ಣ ಭದ್ರತಾ ವ್ಯವಸ್ಥೆ ಕೈಗೊಳ್ಳಲು ಪತ್ರದಲ್ಲಿ ಸೂಚಿಸಲಾಗಿದೆ. ಹೆಸರು ಬಹಿರಂಗಪಡಿಸದ ಇಲಾಖೆಯ ಅಧಿಕಾರಿಯೊಬ್ಬರು ಈ ವಿಷಯ ತಿಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಸಚಿವಾಲಯದ ಸೂಚನೆ ಬಳಿಕ, 12 ಸೇತುವೆಗಳನ್ನು ಒಳಗೊಂಡಿರುವ ಸಿಪಿಇಸಿ ಮಾರ್ಗದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಗಿಲ್ಗಿಟ್–ಬಾಲ್ಟಿಸ್ತಾನದ ಗೃಹಕಾರ್ಯದರ್ಶಿ ಜಾವೆದ್ ಅಕ್ರಂ ಅವರು ಪೊಲೀಸರು ಹಾಗೂ ಗುಪ್ತಚರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಭದ್ರತೆಯ ಪರಿಶೀಲನೆ ನಡೆಸಿದ್ದಾರೆ ಎಂದೂ ವರದಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್: </strong>ಕಾಶ್ಮೀರ ಸಮಸ್ಯೆ ಬಗೆಹರಿಯದೆ ಪ್ರಾದೇಶಿಕವಾಗಿ ಶಾಂತಿ ಮತ್ತು ಸಮೃದ್ಧಿ ನೆಲಸಬೇಕು ಎನ್ನುವ ಕನಸು ಈಡೇರುವುದು ಕಷ್ಟ ಎಂದು ಪಾಕಿಸ್ತಾನ ಸೋಮವಾರ ಹೇಳಿದೆ.</p>.<p>ಕಾಶ್ಮೀರ ಏಕತಾ ದಿನ ಆಚರಣೆ ವೇಳೆ ಈ ವಿಷಯ ಕುರಿತು ಪಾಕಿಸ್ತಾನ ಅಧ್ಯಕ್ಷ ಮಮ್ನೂನ್ ಹುಸೇನ್ ಹಾಗೂ ಪ್ರಧಾನಿ ಶಾಹಿದ್ ಖಕಾನ್ ಅಬ್ಬಾಸಿ ಅವರು ಪ್ರತ್ಯೇಕವಾಗಿ ಹೇಳಿಕೆ ನೀಡಿದ್ದಾರೆ.</p>.<p>ಕಾಶ್ಮೀರವು ಪಾಕಿಸ್ತಾನದ ಭಾಗವಾಗಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್ ಟ್ವೀಟ್ ಮಾಡಿದ್ದಾರೆ.</p>.<p>‘ವಿಶ್ವಸಂಸ್ಥೆಯ ನಿರ್ಣಯಗಳಿಗೆ ಅನುಸಾರವಾಗಿ ಕಣಿವೆಯ ಜನರು ತಮ್ಮ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ರಾಜಕೀಯ, ನೈತಿಕ ಹಾಗೂ ರಾಜತಾಂತ್ರಿಕ ಬೆಂಬಲ ನೀಡುವುದಾಗಿ ಪಾಕಿಸ್ತಾನ ಪುನರುಚ್ಚರಿಸುತ್ತದೆ’ ಎಂದು ಅಧ್ಯಕ್ಷ ಹುಸೇನ್ ಅವರು ತಿಳಿಸಿದ್ದಾರೆ.</p>.<p>‘ವಿಶ್ವಸಂಸ್ಥೆಯ ನಿರ್ಣಯಗಳು ಅಂಗೀಕಾರವಾಗಿ ಏಳು ದಶಕಗಳು ಕಳೆದರೂ ಕಾಶ್ಮೀರದ ಜನತೆ ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ’ ಎಂದು ಪ್ರಧಾನಿ ಅಬ್ಬಾಸಿ ಹೇಳಿದ್ದಾರೆ.</p>.<p>ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿ ಹಾಗೂ ಕಾಶ್ಮೀರದ ಮುಸ್ಲಿಂ ಒಕ್ಕೂಟದ ಮಾನವ ಹಕ್ಕುಗಳ ಕಾಯಂ ನಿಯೋಗದ ಸದಸ್ಯರು ಕಾಶ್ಮೀರಕ್ಕೆ ಭೇಟಿ ನೀಡಲು ಭಾರತದ ಪ್ರಧಾನಿ ಅವಕಾಶ ನೀಡಲಿಲ್ಲ. ಈ ಮೂಲಕ ಕಾಶ್ಮೀರದ ಪರಿಸ್ಥಿತಿಯನ್ನು ಅರಿಯಲು ಅಂತರರಾಷ್ಟ್ರೀಯ ಸಮುದಾಯಕ್ಕೆ ಅವಕಾಶ ನಿರಾಕರಿಸಲಾಯಿತು ಎಂದು ಅವರು ಹೇಳಿದ್ದಾರೆ.</p>.<p>ಪಾಕಿಸ್ತಾನ ಸೋಮವಾರ ಅಧಿಕೃತ ರಜೆ ಘೋಷಿಸಿತ್ತು.</p>.<p>ಕಾಶ್ಮೀರ ಸಮಸ್ಯೆ ಕುರಿತು ಗಮನ ಸೆಳೆಯಲು ಸರ್ಕಾರ ಮತ್ತು ವಿವಿಧ ಸಂಸ್ಥೆಗಳು ರ್ಯಾಲಿ ಆಯೋಜಿಸಿದ್ದವು.</p>.<p>**</p>.<p><strong>‘ಸಿಪಿಇಸಿ ಮೇಲೆ ಭಾರತ ದಾಳಿ ಶಂಕೆ’</strong></p>.<p><strong>ಇಸ್ಲಾಮಾಬಾದ್: </strong>ಬಹುಕೋಟಿ ವೆಚ್ಚದ ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಮಾರ್ಗದ ಮೇಲೆ ಭಾರತ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಶಂಕೆ ವ್ಯಕ್ತಪಡಿಸಿದ್ದಾಗಿ ‘ಡಾನ್’ ಪತ್ರಿಕೆ ವರದಿ ಮಾಡಿದೆ.</p>.<p>ಕರಕೋರಂ ಹೆದ್ದಾರಿ ಮೇಲೆ ಭಾರತ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗಿಲ್ಗಿಟ್–ಬಾಲ್ಟಿಸ್ತಾನ ಗೃಹ ಇಲಾಖೆಗೆ ಸಚಿವಾಲಯ ಪತ್ರ ಬರೆದಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲು ಸಂಪೂರ್ಣ ಭದ್ರತಾ ವ್ಯವಸ್ಥೆ ಕೈಗೊಳ್ಳಲು ಪತ್ರದಲ್ಲಿ ಸೂಚಿಸಲಾಗಿದೆ. ಹೆಸರು ಬಹಿರಂಗಪಡಿಸದ ಇಲಾಖೆಯ ಅಧಿಕಾರಿಯೊಬ್ಬರು ಈ ವಿಷಯ ತಿಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಸಚಿವಾಲಯದ ಸೂಚನೆ ಬಳಿಕ, 12 ಸೇತುವೆಗಳನ್ನು ಒಳಗೊಂಡಿರುವ ಸಿಪಿಇಸಿ ಮಾರ್ಗದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಗಿಲ್ಗಿಟ್–ಬಾಲ್ಟಿಸ್ತಾನದ ಗೃಹಕಾರ್ಯದರ್ಶಿ ಜಾವೆದ್ ಅಕ್ರಂ ಅವರು ಪೊಲೀಸರು ಹಾಗೂ ಗುಪ್ತಚರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಭದ್ರತೆಯ ಪರಿಶೀಲನೆ ನಡೆಸಿದ್ದಾರೆ ಎಂದೂ ವರದಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>