"ನಾನು ಇಂದು ಅಥವಾ ನಾಳೆ ಪ್ರಧಾನಿ ಮತ್ತು ರಾಷ್ಟಪತಿಗಳನ್ನು ಭೇಟಿಯಾಗಿ ಚರ್ಚಿಸುತ್ತೇನೆ. ಸಮಸ್ಯೆಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡುತ್ತೇನೆ. ನಿನ್ನೆ ಸದಾನಂದ ಗೌಡರು ಈ ಸತ್ಯಾಗ್ರಹ ಸ್ಥಳಕ್ಕೆ ಬಂದು ಹೋಗಿದ್ದಾರೆ. ಈ ವಿಷಯದಲ್ಲಿ ಯಾವುದೇ ರಾಜಕೀಯ ಲಾಭಗಳನ್ನು ನಾನು ನಿರೀಕ್ಷಿಸುವುದಿಲ್ಲ. ಸಮಸ್ಯೆಯನ್ನು ನಾನೇ ಬಗೆಹರಿಸಿದೆ ಎಂದು ಯಾರು ಬೇಕಾದರೂ ಬೆನ್ನು ತಟ್ಟಿಕೊಳ್ಳಲಿ. ನಾನಂತೂ ಈ ದೇಶದ ಮಾಜಿ ಪ್ರಧಾನಿಯಾಗಿ, ಸಂಸದನಾಗಿ ಕಕ್ಷಿದಾರರಿಗೆ ಆಗುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿವರವಾಗಿ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇನೆ" ಎಂದು ಹೇಳಿದರು.