‘ಮೋದಿ ಪ್ಯಾರಿಸ್ಗೆ ಹೋಗಿ, ಖುದ್ದಾಗಿ ಒಪ್ಪಂದದಲ್ಲಿ ಬದಲಾವಣೆ ಮಾಡಿದ್ದಾರೆ. ಇದು ಇಡೀ ಭಾರತಕ್ಕೆ ಗೊತ್ತು. ಈಗ, ಯುದ್ಧ ವಿಮಾನಕ್ಕೆ ಎಷ್ಟು ಹಣ ವೆಚ್ಚ ಮಾಡಲಾಗಿದೆ ಎಂಬ ಮಾಹಿತಿಯನ್ನು ಭಾರತದ ಜನರು, ಹುತಾತ್ಮ ಯೋಧರ ಮನೆಯವರಿಗೆ ನೀಡಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವೆ ಹೇಳುತ್ತಿದ್ದಾರೆ. ಇದರ ಅರ್ಥ ಏನು? ಈ ವ್ಯವಹಾರದಲ್ಲಿ ಅವ್ಯವಹಾರ ನಡೆದಿದೆ ಎಂಬುದೇ ಇದರ ಅರ್ಥ’ ಎಂದು ರಾಹುಲ್ ಹರಿಹಾಯ್ದಿದ್ದಾರೆ.