<p><strong>ಮಂಡ್ಯ: </strong>‘ರಾಜ್ಯ ಸರ್ಕಾರ ನನ್ನ ವಿರುದ್ಧ ಸಿಬಿಐ, ಸಿಐಡಿ ತನಿಖೆ ಅಸ್ತ್ರ ಬಳಸಿ ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದೆ. ಆ ರೀತಿಯಾದರೆ ಮುಂದಿನ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸುತ್ತೇನೆ’ ಎಂದು ಸಂಸದ ಸಿ.ಎಸ್.ಪುಟ್ಟರಾಜು ಹೇಳಿದರು.</p>.<p>ಪಾಂಡವಪುರ ತಾಲ್ಲೂಕು, ಚಿನಕುರಳಿ ಗ್ರಾಮದಲ್ಲಿ ಮಂಗಳವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>‘ವಿರೋಧಿಗಳು ಏನೇ ಪಿತೂರಿ ನಡೆಸಿದರೂ ನನ್ನನ್ನು ರಾಜಕೀಯವಾಗಿ ಅಲುಗಾಡಿಸಲು ಸಾಧ್ಯವಿಲ್ಲ.</p>.<p><br /> ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ನನ್ನ ವಿರುದ್ಧ ಸಿಐಡಿ ತನಿಖೆ ನಡೆಸಲಾಗುತ್ತಿದೆ. ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಲಾಗುತ್ತಿದೆ. ನಾನು ಈ ಎಲ್ಲಾ ತನಿಖೆಗಳಿಗೂ ಸಹಕಾರ ನೀಡುತ್ತೇನೆ. ಆದರೆ ನನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಜೈಲಿಗೆ ಕಳುಹಿಸಿದರೆ ಅಲ್ಲಿಂದಲೇ ನಾಮಪತ್ರ ಸಲ್ಲಿಸುತ್ತೇನೆ. ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>‘ರಾಜ್ಯ ಸರ್ಕಾರ ನನ್ನ ವಿರುದ್ಧ ಸಿಬಿಐ, ಸಿಐಡಿ ತನಿಖೆ ಅಸ್ತ್ರ ಬಳಸಿ ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದೆ. ಆ ರೀತಿಯಾದರೆ ಮುಂದಿನ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸುತ್ತೇನೆ’ ಎಂದು ಸಂಸದ ಸಿ.ಎಸ್.ಪುಟ್ಟರಾಜು ಹೇಳಿದರು.</p>.<p>ಪಾಂಡವಪುರ ತಾಲ್ಲೂಕು, ಚಿನಕುರಳಿ ಗ್ರಾಮದಲ್ಲಿ ಮಂಗಳವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>‘ವಿರೋಧಿಗಳು ಏನೇ ಪಿತೂರಿ ನಡೆಸಿದರೂ ನನ್ನನ್ನು ರಾಜಕೀಯವಾಗಿ ಅಲುಗಾಡಿಸಲು ಸಾಧ್ಯವಿಲ್ಲ.</p>.<p><br /> ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ನನ್ನ ವಿರುದ್ಧ ಸಿಐಡಿ ತನಿಖೆ ನಡೆಸಲಾಗುತ್ತಿದೆ. ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಲಾಗುತ್ತಿದೆ. ನಾನು ಈ ಎಲ್ಲಾ ತನಿಖೆಗಳಿಗೂ ಸಹಕಾರ ನೀಡುತ್ತೇನೆ. ಆದರೆ ನನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಜೈಲಿಗೆ ಕಳುಹಿಸಿದರೆ ಅಲ್ಲಿಂದಲೇ ನಾಮಪತ್ರ ಸಲ್ಲಿಸುತ್ತೇನೆ. ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>