<p><strong>ಬೆಂಗಳೂರು:</strong> ಇಂದಿರಾ ಕ್ಯಾಂಟೀನ್ಗಳಿಗೆ ಜಾಗ ಸಿಗದ 24 ವಾರ್ಡ್ಗಳಲ್ಲಿ ಸಂಚಾರಿ ಕ್ಯಾಂಟೀನ್ಗಳ ಮೂಲಕ ಆಹಾರ ಪೂರೈಸುವ ಯೋಜನೆಗೆ ಚಾಲನೆ ನೀಡಿ 10 ದಿನಗಳು ಕಳೆದಿವೆ. ಆದರೆ, ಅವು ಈವರೆಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿಲ್ಲ.</p>.<p>ವಿಧಾನಸೌಧ ಆವರಣದಲ್ಲಿ ಜನವರಿ 26ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 18 ಸಂಚಾರಿ ಕ್ಯಾಂಟೀನ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು.</p>.<p>24 ವಾರ್ಡ್ಗಳ ಪೈಕಿ ಕೆಲವೆಡೆ ಸಂಚಾರಿ ಕ್ಯಾಂಟೀನ್ಗಳು ಕಾರ್ಯಾರಂಭ ಮಾಡಿವೆ. ಇನ್ನೂ ಕೆಲವೆಡೆ ಪ್ರಾಯೋಗಿಕವಾಗಿ ಸಂಚಾರ ನಡೆಸುತ್ತಿವೆ. ವಾಹನದಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಬೇಕಿದೆ. ಇದೇ 10ರಿಂದ 24 ಕ್ಯಾಂಟೀನ್ಗಳು ಕಾರ್ಯಾರಂಭ ಮಾಡಲಿವೆ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ವಾರ್ಡ್ಗಳಲ್ಲಿ ವಾಹನ ನಿಲ್ಲಿಸುವ ಜಾಗವನ್ನು ಅಂತಿಮಗೊಳಿಸಿ, ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ವಾಹನಗಳು ಯಾವ ಮಾರ್ಗದಲ್ಲಿ ಸಂಚರಿಸಬೇಕು ಎಂಬುದನ್ನು ನಿಗದಿಪಡಿಸಿದ ಬಳಿಕ ಸೇವೆ ಆರಂಭವಾಗಲಿದೆ ಎಂದು ಪಾಲಿಕೆಯ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಂದಿರಾ ಕ್ಯಾಂಟೀನ್ಗಳಿಗೆ ಜಾಗ ಸಿಗದ 24 ವಾರ್ಡ್ಗಳಲ್ಲಿ ಸಂಚಾರಿ ಕ್ಯಾಂಟೀನ್ಗಳ ಮೂಲಕ ಆಹಾರ ಪೂರೈಸುವ ಯೋಜನೆಗೆ ಚಾಲನೆ ನೀಡಿ 10 ದಿನಗಳು ಕಳೆದಿವೆ. ಆದರೆ, ಅವು ಈವರೆಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿಲ್ಲ.</p>.<p>ವಿಧಾನಸೌಧ ಆವರಣದಲ್ಲಿ ಜನವರಿ 26ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 18 ಸಂಚಾರಿ ಕ್ಯಾಂಟೀನ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು.</p>.<p>24 ವಾರ್ಡ್ಗಳ ಪೈಕಿ ಕೆಲವೆಡೆ ಸಂಚಾರಿ ಕ್ಯಾಂಟೀನ್ಗಳು ಕಾರ್ಯಾರಂಭ ಮಾಡಿವೆ. ಇನ್ನೂ ಕೆಲವೆಡೆ ಪ್ರಾಯೋಗಿಕವಾಗಿ ಸಂಚಾರ ನಡೆಸುತ್ತಿವೆ. ವಾಹನದಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಬೇಕಿದೆ. ಇದೇ 10ರಿಂದ 24 ಕ್ಯಾಂಟೀನ್ಗಳು ಕಾರ್ಯಾರಂಭ ಮಾಡಲಿವೆ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ವಾರ್ಡ್ಗಳಲ್ಲಿ ವಾಹನ ನಿಲ್ಲಿಸುವ ಜಾಗವನ್ನು ಅಂತಿಮಗೊಳಿಸಿ, ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ವಾಹನಗಳು ಯಾವ ಮಾರ್ಗದಲ್ಲಿ ಸಂಚರಿಸಬೇಕು ಎಂಬುದನ್ನು ನಿಗದಿಪಡಿಸಿದ ಬಳಿಕ ಸೇವೆ ಆರಂಭವಾಗಲಿದೆ ಎಂದು ಪಾಲಿಕೆಯ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>