ರಂಗನತಿಟ್ಟು, ದಾಂಡೇಲಿ ಹಾಗೂ ಬಳ್ಳಾರಿಯಲ್ಲಿ ಈಗಾಗಲೇ ಯಶಸ್ವಿಯಾಗಿರುವ ಈ ಹಬ್ಬ, ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯುತ್ತಿದೆ. ಮಂಗಳೂರು ಸುತ್ತಮುತ್ತಲಿನ ಬೇರೆ ಬೇರೆ ಕಡೆಗಳಲ್ಲಿ ಹಕ್ಕಿಗಳ ವೀಕ್ಷಣೆಗೆ ಅವಕಾಶವಿದೆ. ಕೊನೆಯ ದಿನ ಸಮುದ್ರದಲ್ಲಿ ಸಂಚರಿಸಿ ಹಕ್ಕಿ ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಕರಿಕಾಳನ್ ತಿಳಿಸಿದ್ದಾರೆ.