<p><strong>ಬೆಂಗಳೂರು: ‘</strong>ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಕೈಗೊಳ್ಳುವಾಗ ಈ ಪ್ರದೇಶದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಿಕೊಂಡಿರುವ ಕೃಷಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸುತ್ತೇವೆ’ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಭರವಸೆ ನೀಡಿದರು.</p>.<p>ವಿಧಾನ ಪರಿಷತ್ತಿನಲ್ಲಿ ಬುಧವಾರ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಅವರು ಉತ್ತರಿಸಿದರು.</p>.<p>ಡೀಮ್ಡ್ ಅರಣ್ಯ ವ್ಯಾಪ್ತಿಯಿಂದ ಕೈಬಿಡುವ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡದೇ, ಸಾರ್ವಜನಿಕ ಉದ್ದೇಶಕ್ಕೆ ಬಳಸಲು ಕಾಯ್ದಿರಿಸುವುದಾಗಿ ಲಖಿತ ಉತ್ತರದಲ್ಲಿ ತಿಳಿಸಿದ್ದೀರಿ. ಹಾಗಾದರೆ ಈ ಪ್ರದೇಶದಲ್ಲಿ ಅನಧಿಕೃತವಾಗಿ ಕೃಷಿ ಮಾಡಿಕೊಂಡು ಬಂದಿರುವ ರೈತರಿಗೆ ಯಾವ ರೀತಿ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಪೂಜಾರಿ ಪ್ರಶ್ನಿಸಿದರು.</p>.<p>ಗೊಂದಲ ಮೂಡಿಸುವಂತಿರುವ ಲಿಖಿತ ಉತ್ತರವನ್ನು ಹಿಂದಕ್ಕೆ ಪಡೆಯಬೇಕು ಎಂದು ಅವರು ಒತ್ತಾಯಿಸಿದರು.</p>.<p>‘ಸಚಿವ ಸಂಪುಟದಲ್ಲಿ ತೀರ್ಮಾನವಾದ ವಿಷಯವನ್ನು ಉತ್ತರದಲ್ಲಿ ತಿಳಿಸಿದ್ದೇನೆ. ಜಿಲ್ಲಾ ಮಟ್ಟದ ಸಮಿತಿಯು ಅಂತಿಮಗೊಳಿಸಿರುವ ಡೀಮ್ಡ್ ಅರಣ್ಯದ ವ್ಯಾಪ್ತಿಯಲ್ಲಿ ಕೆಲವೊಂದು ನ್ಯೂನತೆಗಳಿವೆ. ಈ ಬಗ್ಗೆ ಇನ್ನೊಮ್ಮೆ ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಜನರಿಗೆ ನಿವೇಶನ ನೀಡುವುದು ಕೂಡಾ ಸಾರ್ವಜನಿಕ ಉದ್ದೇಶದ ವ್ಯಾಪ್ತಿಯಲ್ಲೇ ಬರುತ್ತದೆ’ ಎಂದು ಸಚಿವ ರೈ ತಿಳಿಸಿದರು.</p>.<p>‘ಕಾನ, ಬಾನ, ಕುಮ್ಕಿ ಸೊಪ್ಪಿನಗುಡ್ಡಗಳೂ ಈ ಹಿಂದೆ ಡೀಮ್ಡ್ ಅರಣ್ಯದ ವ್ಯಾಪ್ತಿಗೆ ಸೇರಿದ್ದವು. ಇಂತಹ ಕಡೆ ಸಾಗುವಳಿ ಮಾಡಿರುವವರಿಗೆ ಹಕ್ಕುಪತ್ರ ಒದಗಿಸಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಆದರೆ. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕಾಗುತ್ತದೆ’ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.</p>.<p><strong>ಅಂಕಿ ಅಂಶ</strong></p>.<p>9.95 ಲಕ್ಷ ಹೆಕ್ಟೇರ್ -ರಾಜ್ಯದಲ್ಲಿರುವ ಡೀಮ್ಡ್ ಅರಣ್ಯದ ಒಟ್ಟು ವಿಸ್ತೀರ್ಣ</p>.<p>3.95 ಲಕ್ಷ ಹೆಕ್ಟೇರ್ -ಜಿಲ್ಲಾ ಸಮಿತಿ ಪ್ರಕಾರ ಡೀಮ್ಡ್ ಅರಣ್ಯದ ವಿಸ್ತೀರ್ಣ</p>.<p>3.30 ಲಕ್ಷ ಹೆಕ್ಟೇರ್ -ಸಂಪುಟ ಅಂತಿಮಗೊಳಿದ ಡೀಮ್ಡ್ ಅರಣ್ಯದ ವಿಸ್ತೀರ್ಣ</p>.<p>1,73 ಲಕ್ಷ ಹೆಕ್ಟೇರ್ -ಸಾರ್ವಜನಿಕ ಉದ್ದೇಶಕ್ಕೆ ಬಳಸಲು ತೀರ್ಮಾನಿಸಿದ ಡೀಮ್ಡ್ ಅರಣ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಕೈಗೊಳ್ಳುವಾಗ ಈ ಪ್ರದೇಶದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಿಕೊಂಡಿರುವ ಕೃಷಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸುತ್ತೇವೆ’ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಭರವಸೆ ನೀಡಿದರು.</p>.<p>ವಿಧಾನ ಪರಿಷತ್ತಿನಲ್ಲಿ ಬುಧವಾರ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಅವರು ಉತ್ತರಿಸಿದರು.</p>.<p>ಡೀಮ್ಡ್ ಅರಣ್ಯ ವ್ಯಾಪ್ತಿಯಿಂದ ಕೈಬಿಡುವ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡದೇ, ಸಾರ್ವಜನಿಕ ಉದ್ದೇಶಕ್ಕೆ ಬಳಸಲು ಕಾಯ್ದಿರಿಸುವುದಾಗಿ ಲಖಿತ ಉತ್ತರದಲ್ಲಿ ತಿಳಿಸಿದ್ದೀರಿ. ಹಾಗಾದರೆ ಈ ಪ್ರದೇಶದಲ್ಲಿ ಅನಧಿಕೃತವಾಗಿ ಕೃಷಿ ಮಾಡಿಕೊಂಡು ಬಂದಿರುವ ರೈತರಿಗೆ ಯಾವ ರೀತಿ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಪೂಜಾರಿ ಪ್ರಶ್ನಿಸಿದರು.</p>.<p>ಗೊಂದಲ ಮೂಡಿಸುವಂತಿರುವ ಲಿಖಿತ ಉತ್ತರವನ್ನು ಹಿಂದಕ್ಕೆ ಪಡೆಯಬೇಕು ಎಂದು ಅವರು ಒತ್ತಾಯಿಸಿದರು.</p>.<p>‘ಸಚಿವ ಸಂಪುಟದಲ್ಲಿ ತೀರ್ಮಾನವಾದ ವಿಷಯವನ್ನು ಉತ್ತರದಲ್ಲಿ ತಿಳಿಸಿದ್ದೇನೆ. ಜಿಲ್ಲಾ ಮಟ್ಟದ ಸಮಿತಿಯು ಅಂತಿಮಗೊಳಿಸಿರುವ ಡೀಮ್ಡ್ ಅರಣ್ಯದ ವ್ಯಾಪ್ತಿಯಲ್ಲಿ ಕೆಲವೊಂದು ನ್ಯೂನತೆಗಳಿವೆ. ಈ ಬಗ್ಗೆ ಇನ್ನೊಮ್ಮೆ ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಜನರಿಗೆ ನಿವೇಶನ ನೀಡುವುದು ಕೂಡಾ ಸಾರ್ವಜನಿಕ ಉದ್ದೇಶದ ವ್ಯಾಪ್ತಿಯಲ್ಲೇ ಬರುತ್ತದೆ’ ಎಂದು ಸಚಿವ ರೈ ತಿಳಿಸಿದರು.</p>.<p>‘ಕಾನ, ಬಾನ, ಕುಮ್ಕಿ ಸೊಪ್ಪಿನಗುಡ್ಡಗಳೂ ಈ ಹಿಂದೆ ಡೀಮ್ಡ್ ಅರಣ್ಯದ ವ್ಯಾಪ್ತಿಗೆ ಸೇರಿದ್ದವು. ಇಂತಹ ಕಡೆ ಸಾಗುವಳಿ ಮಾಡಿರುವವರಿಗೆ ಹಕ್ಕುಪತ್ರ ಒದಗಿಸಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಆದರೆ. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕಾಗುತ್ತದೆ’ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.</p>.<p><strong>ಅಂಕಿ ಅಂಶ</strong></p>.<p>9.95 ಲಕ್ಷ ಹೆಕ್ಟೇರ್ -ರಾಜ್ಯದಲ್ಲಿರುವ ಡೀಮ್ಡ್ ಅರಣ್ಯದ ಒಟ್ಟು ವಿಸ್ತೀರ್ಣ</p>.<p>3.95 ಲಕ್ಷ ಹೆಕ್ಟೇರ್ -ಜಿಲ್ಲಾ ಸಮಿತಿ ಪ್ರಕಾರ ಡೀಮ್ಡ್ ಅರಣ್ಯದ ವಿಸ್ತೀರ್ಣ</p>.<p>3.30 ಲಕ್ಷ ಹೆಕ್ಟೇರ್ -ಸಂಪುಟ ಅಂತಿಮಗೊಳಿದ ಡೀಮ್ಡ್ ಅರಣ್ಯದ ವಿಸ್ತೀರ್ಣ</p>.<p>1,73 ಲಕ್ಷ ಹೆಕ್ಟೇರ್ -ಸಾರ್ವಜನಿಕ ಉದ್ದೇಶಕ್ಕೆ ಬಳಸಲು ತೀರ್ಮಾನಿಸಿದ ಡೀಮ್ಡ್ ಅರಣ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>