<p><strong>ಬೆಂಗಳೂರು:</strong> ಮಠಗಳು, ಅವುಗಳಿಗೆ ಸೇರಿದ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳು, ಜೈನ, ಬೌದ್ಧ, ಸಿಖ್ ಸಮುದಾಯಗಳ ಧಾರ್ಮಿಕ ಸಂಸ್ಥೆಗಳನ್ನು ಧಾರ್ಮಿಕ ದತ್ತಿ ಕಾಯ್ದೆ ಅಡಿ ಸೇರಿಸುವ ಬಗ್ಗೆ ಸಾರ್ವಜನಿಕರ ಸಲಹೆ, ಅಭಿಪ್ರಾಯಗಳನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಈ ಹಿಂದೆ ಜಾರಿಯಲ್ಲಿದ್ದ ಕಾಯ್ದೆಯನ್ನು ಹೈಕೋರ್ಟ್ ಧಾರವಾಡ ಪೀಠ 2005ರಲ್ಲಿ ರದ್ದುಪಡಿಸಿದೆ. ಹೊಸ ಕಾಯ್ದೆ ರೂಪಿಸುವ ಸಂಬಂಧ ನ್ಯಾಯಮೂರ್ತಿ ರಾಮಾ ಜೋಯಿಸ್ ನೇತೃತ್ವದಲ್ಲಿ ಕರಡು ಸಮಿತಿ ನೇಮಿಸಲಾಗಿತ್ತು. ಈ ಸಮಿತಿ ಜ. 29ರಂದು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದೆ. ಇದಕ್ಕೆ ರಾಜ್ಯದ ವಿವಿಧ ಮಠಾಧೀಶರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪ್ರಕಟಣೆಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ರಾಜ್ಯ ಸರ್ಕಾರ ಗುರುವಾರ ಈ ಸಂಬಂಧ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.</p>.<p>ನೂತನ ಕಾಯ್ದೆ ಕರಡು ಸಮಿತಿಯ ಸಂಚಾಲಕ ಜಯಪ್ರಕಾಶ್ ಹೊರಡಿಸಿರುವ ಪ್ರಕಟಣೆಯಲ್ಲಿ, ಧಾರ್ಮಿಕ ಸಂಸ್ಥೆಗಳನ್ನೂ ಕಾಯ್ದೆ ವ್ಯಾಪ್ತಿಗೆ ಒಳಪಡಿಸಬೇಕೆ, ಒಳಪಡಿಸುವುದಾದರೆ ಯಾವ ರೀತಿಯಲ್ಲಿ ಮತ್ತು ಎಷ್ಟರ ಮಟ್ಟಿಗೆ ಒಳಪಡಿಸಬೇಕು ಎಂದೂ ಸಮಿತಿ ಕೇಳಿದೆ.</p>.<p>ಅರ್ಚಕರು, ದೇವಸ್ಥಾನಗಳ ಆಡಳಿತ ವರ್ಗ, ಸಿಬ್ಬಂದಿ, ರಾಜ್ಯದ ಧರ್ಮ ಗುರುಗಳು, ಮಠಗಳ ಪೀಠಾಧಿಪತಿಗಳು ಅಥವಾ ಉತ್ತರಾಧಿಕಾರಿಗಳಷ್ಟೆ ಅಲ್ಲದೆ, ಸಾರ್ವಜನಿಕರೂ ಈ ಬಗ್ಗೆ ಸಲಹೆ, ಅಭಿಪ್ರಾಯಗಳನ್ನು ನೀಡಬಹುದು. 15 ದಿನಗಳ ಒಳಗೆ ಇಲಾಖೆಯ ಆಯುಕ್ತರಿಗೆ ಅಭಿಪ್ರಾಯಗಳನ್ನು ತಿಳಿಸಬಹುದು ಎಂದೂ ಈ ಪ್ರಕಟಣೆ ಹೇಳಿದೆ.</p>.<p><strong>‘ಮಠ, ಮಂದಿರಗಳಿಗೆ ಕೈ ಇಟ್ಟರೆ ಭಸ್ಮ’:</strong></p>.<p>‘ಮಠ, ಮಂದಿರಗಳಿಗೆ ಕೈ ಇಟ್ಟರೆ ಸರ್ಕಾರ ಭಸ್ಮ ಆಗಲಿದೆ’ ಎಂದು ಬಿಜೆಪಿ ಶಾಸಕ ಆರ್. ಅಶೋಕ ಎಚ್ಚರಿಕೆ ನೀಡಿದರು.</p>.<p>‘ಈ ಪ್ರಕಟಣೆಯಲ್ಲಿ ಮಸೀದಿಗಳ ಪ್ರಸ್ತಾವ ಯಾಕಿಲ್ಲ. ಮಠಗಳನ್ನು ವಶಕ್ಕೆ ಪಡೆದುಕೊಂಡು ಸರ್ವನಾಶ ಮಾಡಲು ಸರ್ಕಾರ ಹೊರಟಿದೆ’ ಎಂದು ಅವರು ಟೀಕಿಸಿದರು.</p>.<p>‘ಮಠಮಾನ್ಯಗಳ ಮೇಲೆ ನಿಯಂತ್ರಣ ಹೇರಲು ಹೊರಟಿದೆ. ಜಾತಿಗಳನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್, ಇದೀಗ ಈ ಕೆಲಸಕ್ಕೆ ಮುಂದಾಗಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅದೇ ಪಕ್ಷದ ಶಾಸಕರಾದ ಸಿ.ಟಿ.ರವಿ, ಡಿ.ಎನ್. ಜೀವರಾಜ್ ಕೂಡಾ ಆಕ್ರೋಶ ವ್ಯಕ್ತಪಡಿಸಿದರು.</p>.<p><strong>‘ಕೋರ್ಟ್ ನಿರ್ದೇಶನದಂತೆ ಅಭಿಪ್ರಾಯ ಸಂಗ್ರಹ’</strong></p>.<p>‘ಧಾರ್ಮಿಕ ದತ್ತಿ ಕಾಯ್ದೆಯನ್ನು ಧಾರವಾಡ ಹೈಕೋರ್ಟ್ ರದ್ದುಪಡಿಸಿ ಆದೇಶ ನೀಡಿದೆ. ಕೋರ್ಟ್ ನಿರ್ದೇಶನದಂತೆ ಹೊಸ ಕಾಯ್ದೆ ರೂಪಿಸಲು ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ’ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದರು.</p>.<p>‘ಕಾಯ್ದೆಯ ಕರಡು ರಚಿಸಲು ಸಮಿತಿ ರಚಿಸಲಾಗಿದೆ. ಸಂಬಂಧಿಸಿದವರಿಂದ ಅಹವಾಲು ಕೇಳಿದ್ದೇವೆ ಅಷ್ಟೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರು ಬುಧವಾರ ತಿಳಿಸಿದರು.</p>.<p>‘ಮಠಗಳನ್ನು ನಿಯಂತ್ರಿಸುವ ಕೆಲಸವನ್ನು ನಾವು ಮಾಡುತ್ತಿಲ್ಲ. ಧಾರ್ಮಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳುವ ಉದ್ದೇಶ ಇಲ್ಲ’ ಎಂದೂ ಸಚಿವರು ಸ್ಪಷ್ಟಪಡಿಸಿದರು.</p>.<p>‘ಬಿಜೆಪಿಯವರು ಜನರನ್ನು ಎತ್ತಿ ಕಟ್ಟುತ್ತಿದ್ದಾರೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಮಠಾಧೀಶರು ಹೆದರುವ ಅವಶ್ಯಕತೆ ಇಲ್ಲ’ ಎಂದೂ ಅವರು ಹೇಳಿದರು.</p>.<p>‘ಈ ಪ್ರಕಟಣೆಯಲ್ಲಿ ಮಸೀದಿಗಳ ಪ್ರಸ್ತಾವ ಯಾಕಿಲ್ಲ. ಮಠಗಳನ್ನು ವಶಕ್ಕೆ ಪಡೆದುಕೊಂಡು ಸರ್ವನಾಶ ಮಾಡಲು ಸರ್ಕಾರ ಹೊರಟಿದೆ’ ಎಂದು ಅವರು ಟೀಕಿಸಿದರು.</p>.<p>‘ಮಠಮಾನ್ಯಗಳ ಮೇಲೆ ನಿಯಂತ್ರಣ ಹೇರಲು ಹೊರಟಿದೆ. ಜಾತಿಗಳನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್, ಇದೀಗ ಈ ಕೆಲಸಕ್ಕೆ ಮುಂದಾಗಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅದೇ ಪಕ್ಷದ ಶಾಸಕರಾದ ಸಿ.ಟಿ.ರವಿ, ಡಿ.ಎನ್. ಜೀವರಾಜ್ ಕೂಡಾ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಠಗಳು, ಅವುಗಳಿಗೆ ಸೇರಿದ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳು, ಜೈನ, ಬೌದ್ಧ, ಸಿಖ್ ಸಮುದಾಯಗಳ ಧಾರ್ಮಿಕ ಸಂಸ್ಥೆಗಳನ್ನು ಧಾರ್ಮಿಕ ದತ್ತಿ ಕಾಯ್ದೆ ಅಡಿ ಸೇರಿಸುವ ಬಗ್ಗೆ ಸಾರ್ವಜನಿಕರ ಸಲಹೆ, ಅಭಿಪ್ರಾಯಗಳನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಈ ಹಿಂದೆ ಜಾರಿಯಲ್ಲಿದ್ದ ಕಾಯ್ದೆಯನ್ನು ಹೈಕೋರ್ಟ್ ಧಾರವಾಡ ಪೀಠ 2005ರಲ್ಲಿ ರದ್ದುಪಡಿಸಿದೆ. ಹೊಸ ಕಾಯ್ದೆ ರೂಪಿಸುವ ಸಂಬಂಧ ನ್ಯಾಯಮೂರ್ತಿ ರಾಮಾ ಜೋಯಿಸ್ ನೇತೃತ್ವದಲ್ಲಿ ಕರಡು ಸಮಿತಿ ನೇಮಿಸಲಾಗಿತ್ತು. ಈ ಸಮಿತಿ ಜ. 29ರಂದು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದೆ. ಇದಕ್ಕೆ ರಾಜ್ಯದ ವಿವಿಧ ಮಠಾಧೀಶರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪ್ರಕಟಣೆಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ರಾಜ್ಯ ಸರ್ಕಾರ ಗುರುವಾರ ಈ ಸಂಬಂಧ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.</p>.<p>ನೂತನ ಕಾಯ್ದೆ ಕರಡು ಸಮಿತಿಯ ಸಂಚಾಲಕ ಜಯಪ್ರಕಾಶ್ ಹೊರಡಿಸಿರುವ ಪ್ರಕಟಣೆಯಲ್ಲಿ, ಧಾರ್ಮಿಕ ಸಂಸ್ಥೆಗಳನ್ನೂ ಕಾಯ್ದೆ ವ್ಯಾಪ್ತಿಗೆ ಒಳಪಡಿಸಬೇಕೆ, ಒಳಪಡಿಸುವುದಾದರೆ ಯಾವ ರೀತಿಯಲ್ಲಿ ಮತ್ತು ಎಷ್ಟರ ಮಟ್ಟಿಗೆ ಒಳಪಡಿಸಬೇಕು ಎಂದೂ ಸಮಿತಿ ಕೇಳಿದೆ.</p>.<p>ಅರ್ಚಕರು, ದೇವಸ್ಥಾನಗಳ ಆಡಳಿತ ವರ್ಗ, ಸಿಬ್ಬಂದಿ, ರಾಜ್ಯದ ಧರ್ಮ ಗುರುಗಳು, ಮಠಗಳ ಪೀಠಾಧಿಪತಿಗಳು ಅಥವಾ ಉತ್ತರಾಧಿಕಾರಿಗಳಷ್ಟೆ ಅಲ್ಲದೆ, ಸಾರ್ವಜನಿಕರೂ ಈ ಬಗ್ಗೆ ಸಲಹೆ, ಅಭಿಪ್ರಾಯಗಳನ್ನು ನೀಡಬಹುದು. 15 ದಿನಗಳ ಒಳಗೆ ಇಲಾಖೆಯ ಆಯುಕ್ತರಿಗೆ ಅಭಿಪ್ರಾಯಗಳನ್ನು ತಿಳಿಸಬಹುದು ಎಂದೂ ಈ ಪ್ರಕಟಣೆ ಹೇಳಿದೆ.</p>.<p><strong>‘ಮಠ, ಮಂದಿರಗಳಿಗೆ ಕೈ ಇಟ್ಟರೆ ಭಸ್ಮ’:</strong></p>.<p>‘ಮಠ, ಮಂದಿರಗಳಿಗೆ ಕೈ ಇಟ್ಟರೆ ಸರ್ಕಾರ ಭಸ್ಮ ಆಗಲಿದೆ’ ಎಂದು ಬಿಜೆಪಿ ಶಾಸಕ ಆರ್. ಅಶೋಕ ಎಚ್ಚರಿಕೆ ನೀಡಿದರು.</p>.<p>‘ಈ ಪ್ರಕಟಣೆಯಲ್ಲಿ ಮಸೀದಿಗಳ ಪ್ರಸ್ತಾವ ಯಾಕಿಲ್ಲ. ಮಠಗಳನ್ನು ವಶಕ್ಕೆ ಪಡೆದುಕೊಂಡು ಸರ್ವನಾಶ ಮಾಡಲು ಸರ್ಕಾರ ಹೊರಟಿದೆ’ ಎಂದು ಅವರು ಟೀಕಿಸಿದರು.</p>.<p>‘ಮಠಮಾನ್ಯಗಳ ಮೇಲೆ ನಿಯಂತ್ರಣ ಹೇರಲು ಹೊರಟಿದೆ. ಜಾತಿಗಳನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್, ಇದೀಗ ಈ ಕೆಲಸಕ್ಕೆ ಮುಂದಾಗಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅದೇ ಪಕ್ಷದ ಶಾಸಕರಾದ ಸಿ.ಟಿ.ರವಿ, ಡಿ.ಎನ್. ಜೀವರಾಜ್ ಕೂಡಾ ಆಕ್ರೋಶ ವ್ಯಕ್ತಪಡಿಸಿದರು.</p>.<p><strong>‘ಕೋರ್ಟ್ ನಿರ್ದೇಶನದಂತೆ ಅಭಿಪ್ರಾಯ ಸಂಗ್ರಹ’</strong></p>.<p>‘ಧಾರ್ಮಿಕ ದತ್ತಿ ಕಾಯ್ದೆಯನ್ನು ಧಾರವಾಡ ಹೈಕೋರ್ಟ್ ರದ್ದುಪಡಿಸಿ ಆದೇಶ ನೀಡಿದೆ. ಕೋರ್ಟ್ ನಿರ್ದೇಶನದಂತೆ ಹೊಸ ಕಾಯ್ದೆ ರೂಪಿಸಲು ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ’ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದರು.</p>.<p>‘ಕಾಯ್ದೆಯ ಕರಡು ರಚಿಸಲು ಸಮಿತಿ ರಚಿಸಲಾಗಿದೆ. ಸಂಬಂಧಿಸಿದವರಿಂದ ಅಹವಾಲು ಕೇಳಿದ್ದೇವೆ ಅಷ್ಟೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರು ಬುಧವಾರ ತಿಳಿಸಿದರು.</p>.<p>‘ಮಠಗಳನ್ನು ನಿಯಂತ್ರಿಸುವ ಕೆಲಸವನ್ನು ನಾವು ಮಾಡುತ್ತಿಲ್ಲ. ಧಾರ್ಮಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳುವ ಉದ್ದೇಶ ಇಲ್ಲ’ ಎಂದೂ ಸಚಿವರು ಸ್ಪಷ್ಟಪಡಿಸಿದರು.</p>.<p>‘ಬಿಜೆಪಿಯವರು ಜನರನ್ನು ಎತ್ತಿ ಕಟ್ಟುತ್ತಿದ್ದಾರೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಮಠಾಧೀಶರು ಹೆದರುವ ಅವಶ್ಯಕತೆ ಇಲ್ಲ’ ಎಂದೂ ಅವರು ಹೇಳಿದರು.</p>.<p>‘ಈ ಪ್ರಕಟಣೆಯಲ್ಲಿ ಮಸೀದಿಗಳ ಪ್ರಸ್ತಾವ ಯಾಕಿಲ್ಲ. ಮಠಗಳನ್ನು ವಶಕ್ಕೆ ಪಡೆದುಕೊಂಡು ಸರ್ವನಾಶ ಮಾಡಲು ಸರ್ಕಾರ ಹೊರಟಿದೆ’ ಎಂದು ಅವರು ಟೀಕಿಸಿದರು.</p>.<p>‘ಮಠಮಾನ್ಯಗಳ ಮೇಲೆ ನಿಯಂತ್ರಣ ಹೇರಲು ಹೊರಟಿದೆ. ಜಾತಿಗಳನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್, ಇದೀಗ ಈ ಕೆಲಸಕ್ಕೆ ಮುಂದಾಗಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅದೇ ಪಕ್ಷದ ಶಾಸಕರಾದ ಸಿ.ಟಿ.ರವಿ, ಡಿ.ಎನ್. ಜೀವರಾಜ್ ಕೂಡಾ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>