‘ಹುಬ್ಬಳ್ಳಿ ಕೇಂದ್ರದಲ್ಲಿ ಕರೆಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅಲ್ಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರಿನಲ್ಲಿ ಕೇಂದ್ರ ಪ್ರಾರಂಭಿಸಿದ್ದೇವೆ. ಶೀಘ್ರದಲ್ಲಿ ರಾಯಚೂರಿನಲ್ಲಿಯೂ ಕೇಂದ್ರ ಆರಂಭಗೊಳ್ಳಲಿದೆ. ಸಣ್ಣಪುಟ್ಟ ಕಾಯಿಲೆಗಳ ಕುರಿತು ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆ ಕುರಿತು ಮಾಹಿತಿ, ವೈದ್ಯಕೀಯ ಅದಾಲತ್, ಆಪ್ತ ಸಮಾಲೋಚನೆ ಹಾಗೂ ಆರೋಗ್ಯ ಕಾರ್ಯಕ್ರಮಗಳ ಕುರಿತು ಇಲ್ಲಿ ಮಾಹಿತಿ ನೀಡಲಾಗುತ್ತದೆ’ ಎಂದರು.