<p><strong>ಬೆಂಗಳೂರು:</strong> ಮ್ಯಾನ್ಹೋಲ್, ಎಸ್ಟಿಪಿ ಹಾಗೂ ಸೆಪ್ಟಿಕ್ ಟ್ಯಾಂಕ್ಗಳ ಸ್ವಚ್ಛತೆಗಾಗಿ ಮಾನವರನ್ನು ಇಳಿಸಬಾರದು ಎಂದು ಒತ್ತಾಯಿಸಿ ನೂರಾರು ಕಾರ್ಮಿಕರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಸಿಪಿಐಎಂ ಹಾಗೂ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿ<br /> ಗಳು, ಹೋರಾಟಗಾರರು, ಗುತ್ತಿಗೆ ಪೌರಕಾರ್ಮಿಕರು, ಜಲಮಂಡಳಿ ಗುತ್ತಿಗೆ ಕಾರ್ಮಿಕರು ಭಾಗವಹಿಸಿದ್ದರು.<br /> ಪುರಭವನದಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಮೆರವಣಿಗೆ ನಡೆಯಿತು.</p>.<p>ರಾಜ್ಯದಲ್ಲಿ ಮಲ ಹೊರುವ ಪದ್ಧತಿಯಿಂದ 2008ರಿಂದ ಇಲ್ಲಿಯವರೆಗೆ 70 ಮಂದಿ ಸತ್ತಿದ್ದಾರೆ. ಈ ಪದ್ಧತಿ ನಿಷೇಧವಾಗಿದ್ದರೂ ಪ್ರಕರಣ<br /> ಗಳು ದಾಖಲಾಗುತ್ತಲೇ ಇವೆ. ಅದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಸಿಪಿಎಂಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಲಿಫ್ಟನ್ ರೊಜಾರಿಯೋ, ‘ಚಂದ್ರಗ್ರಹಕ್ಕೆ ಉಪಗ್ರಹಗಳನ್ನು ಕಳುಹಿಸುವ ತಂತ್ರಜ್ಞಾನ ಹೊಂದಿರುವ ನಮ್ಮ ಬಳಿ ಮ್ಯಾನ್ಹೋಲ್, ಸೆಪ್ಟಿಕ್ ಟ್ಯಾಂಕ್ ಶುಚಿಗೆ ತಂತ್ರಜ್ಞಾನ ಇಲ್ಲದಿರುವುದು ವಿಪರ್ಯಾಸವೇ ಸರಿ’ ಎಂದರು.</p>.<p>ಬೆಂಗಳೂರು ಜಲ ಮಂಡಳಿ ಗುತ್ತಿಗೆ ಕಾರ್ಮಿಕರ ಸಂಘದ ಸದಸ್ಯ ಸತೀಶ್, ‘ಜಲಮಂಡಳಿಯ ಅಧೀನದಲ್ಲಿ 38 ಸೆಪ್ಟಿಕ್ ಟ್ಯಾಂಕ್ಗಳಿವೆ. ಅವುಗಳ ಸ್ವಚ್ಛತೆಗೆ ಕಾರ್ಮಿಕರನ್ನೇ ಬಳಸಲಾಗುತ್ತಿದೆ. ಈ ಬಗ್ಗೆ ಸಫಾಯಿ ಕರ್ಮಚಾರಿ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದು ಹೇಳಿದರು.</p>.<p>ಹೊರುವ ಪದ್ಧತಿ ಇನ್ನೂ ಜೀವಂತವಾಗಿರಲು ಜಾತಿಯೇ ಮೂಲ ಕಾರಣ. ಮೊದಲು ಅದನ್ನು ನಾಶಮಾಡಬೇಕು<br /> <strong>-ನಿರ್ಮಲಾ, ಗುತ್ತಿಗೆ ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ</strong></p>.<p><strong>ಪ್ರತಿಭಟನಾಕಾರರ ಹಕ್ಕೊತ್ತಾಯಗಳು</strong></p>.<p>- ಮಲಹೊರುವ ಪದ್ಧತಿಯಿಂದ ತೊಂದರೆಗೆ ಸಿಲುಕಿದವರಿಗೆ ಪುನರ್ವಸತಿ ಕಲ್ಪಿಸಲು ಬಜೆಟ್ನಲ್ಲಿ ಹಣ ಮೀಸಲಿಡಬೇಕು</p>.<p>-ಕಾರ್ಮಿಕರು ಸಾವಿಗೆ ಅಧಿಕಾರಿಗಳನ್ನು ಹೊಣೆಯಾಗಿಸಬೇಕು</p>.<p>-ಮೃತರ ಕುಟುಂಬಸ್ಥರಿಗೆ ₹50 ಲಕ್ಷ ಪರಿಹಾರ ನೀಡಬೇಕು</p>.<p>- ಮಲಹೊರುವ ಪದ್ಧತಿ ಕೊನೆಗಾಣಿಸಲು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮ್ಯಾನ್ಹೋಲ್, ಎಸ್ಟಿಪಿ ಹಾಗೂ ಸೆಪ್ಟಿಕ್ ಟ್ಯಾಂಕ್ಗಳ ಸ್ವಚ್ಛತೆಗಾಗಿ ಮಾನವರನ್ನು ಇಳಿಸಬಾರದು ಎಂದು ಒತ್ತಾಯಿಸಿ ನೂರಾರು ಕಾರ್ಮಿಕರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಸಿಪಿಐಎಂ ಹಾಗೂ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿ<br /> ಗಳು, ಹೋರಾಟಗಾರರು, ಗುತ್ತಿಗೆ ಪೌರಕಾರ್ಮಿಕರು, ಜಲಮಂಡಳಿ ಗುತ್ತಿಗೆ ಕಾರ್ಮಿಕರು ಭಾಗವಹಿಸಿದ್ದರು.<br /> ಪುರಭವನದಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಮೆರವಣಿಗೆ ನಡೆಯಿತು.</p>.<p>ರಾಜ್ಯದಲ್ಲಿ ಮಲ ಹೊರುವ ಪದ್ಧತಿಯಿಂದ 2008ರಿಂದ ಇಲ್ಲಿಯವರೆಗೆ 70 ಮಂದಿ ಸತ್ತಿದ್ದಾರೆ. ಈ ಪದ್ಧತಿ ನಿಷೇಧವಾಗಿದ್ದರೂ ಪ್ರಕರಣ<br /> ಗಳು ದಾಖಲಾಗುತ್ತಲೇ ಇವೆ. ಅದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಸಿಪಿಎಂಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಲಿಫ್ಟನ್ ರೊಜಾರಿಯೋ, ‘ಚಂದ್ರಗ್ರಹಕ್ಕೆ ಉಪಗ್ರಹಗಳನ್ನು ಕಳುಹಿಸುವ ತಂತ್ರಜ್ಞಾನ ಹೊಂದಿರುವ ನಮ್ಮ ಬಳಿ ಮ್ಯಾನ್ಹೋಲ್, ಸೆಪ್ಟಿಕ್ ಟ್ಯಾಂಕ್ ಶುಚಿಗೆ ತಂತ್ರಜ್ಞಾನ ಇಲ್ಲದಿರುವುದು ವಿಪರ್ಯಾಸವೇ ಸರಿ’ ಎಂದರು.</p>.<p>ಬೆಂಗಳೂರು ಜಲ ಮಂಡಳಿ ಗುತ್ತಿಗೆ ಕಾರ್ಮಿಕರ ಸಂಘದ ಸದಸ್ಯ ಸತೀಶ್, ‘ಜಲಮಂಡಳಿಯ ಅಧೀನದಲ್ಲಿ 38 ಸೆಪ್ಟಿಕ್ ಟ್ಯಾಂಕ್ಗಳಿವೆ. ಅವುಗಳ ಸ್ವಚ್ಛತೆಗೆ ಕಾರ್ಮಿಕರನ್ನೇ ಬಳಸಲಾಗುತ್ತಿದೆ. ಈ ಬಗ್ಗೆ ಸಫಾಯಿ ಕರ್ಮಚಾರಿ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದು ಹೇಳಿದರು.</p>.<p>ಹೊರುವ ಪದ್ಧತಿ ಇನ್ನೂ ಜೀವಂತವಾಗಿರಲು ಜಾತಿಯೇ ಮೂಲ ಕಾರಣ. ಮೊದಲು ಅದನ್ನು ನಾಶಮಾಡಬೇಕು<br /> <strong>-ನಿರ್ಮಲಾ, ಗುತ್ತಿಗೆ ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ</strong></p>.<p><strong>ಪ್ರತಿಭಟನಾಕಾರರ ಹಕ್ಕೊತ್ತಾಯಗಳು</strong></p>.<p>- ಮಲಹೊರುವ ಪದ್ಧತಿಯಿಂದ ತೊಂದರೆಗೆ ಸಿಲುಕಿದವರಿಗೆ ಪುನರ್ವಸತಿ ಕಲ್ಪಿಸಲು ಬಜೆಟ್ನಲ್ಲಿ ಹಣ ಮೀಸಲಿಡಬೇಕು</p>.<p>-ಕಾರ್ಮಿಕರು ಸಾವಿಗೆ ಅಧಿಕಾರಿಗಳನ್ನು ಹೊಣೆಯಾಗಿಸಬೇಕು</p>.<p>-ಮೃತರ ಕುಟುಂಬಸ್ಥರಿಗೆ ₹50 ಲಕ್ಷ ಪರಿಹಾರ ನೀಡಬೇಕು</p>.<p>- ಮಲಹೊರುವ ಪದ್ಧತಿ ಕೊನೆಗಾಣಿಸಲು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>