ಜಿಲ್ಲಾಡಳಿತವು 2016ರ ಜುಲೈನಲ್ಲಿ ಈ ಜಮೀನನ್ನು ವಶಕ್ಕೆ ಪಡೆದಿತ್ತು. ಆ ವ್ಯಕ್ತಿಯು ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಮಾಡಿದೆ. ಈ ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವಂತಿಲ್ಲ ಎಂದೂ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ. ಆದರೂ, ಆ ವ್ಯಕ್ತಿ ಆ ಜಾಗದಲ್ಲಿ ಮಣ್ಣು ತುಂಬಿಸಿದ್ದಾರೆ. ಇಲ್ಲಿ ಅನಿಲ ಸಾಗಿಸುವ ಲಾರಿಗಳನ್ನು ನಿಲ್ಲಿಸಲು ಅವಕಾಶ ಮಾಡಿಕೊಟ್ಟು ಪ್ರತಿ ಲಾರಿಗೆ ಇಂತಿಷ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕಾಗಿಯೇ ಕಾವಲುಗಾರನ್ನು ನೇಮಿಸಿ, ಆತನಿಗೆ ಶೆಡ್ ಕಟ್ಟಿಕೊಟ್ಟಿದ್ದಾರೆ. ದಿನವೊಂದಕ್ಕೆ ಏನಿಲ್ಲವೆಂದೂ 2 ಲಕ್ಷ ದಿಂದ 2.5 ಲಕ್ಷದಷ್ಟು ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದರು.