<p><strong>ಚಿಕ್ಕಮಗಳೂರು:</strong> ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಉಪ್ಪಳ್ಳಿ– ಇಂದಾವರ ಗ್ರಾಮಗಳ ರೈತರ ಸಹಭಾಗಿತ್ವದಲ್ಲಿ ಉಪ್ಪಳ್ಳಿ ಸಮೀಪ ಎ.ಬಿ.ವಾಜ ಪೇಯಿ ಬಡಾವಣೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದ್ದು, ಒಂದು ವರ್ಷದಲ್ಲಿ ಬಡಾವಣೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಹನೀಫ್ ತಿಳಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2008–09ನೇ ಸಾಲಿನಲ್ಲಿ ವಾಜಪೇಯಿ ವಸತಿ ಯೋಜನೆ ರೂಪಿಸಲಾಗಿತ್ತು. ನಿವೇಶನ ಬೇಡಿಕೆ ಸಮೀಕ್ಷೆಯಲ್ಲಿ ಒಟ್ಟು 7,954 ನಿವೇಶನಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ. ಉಪ್ಪಳ್ಳಿ–ಇಂದಾವರ ಗ್ರಾಮಗಳ ರೈತರ ಸಹಭಾಗಿತ್ವದಲ್ಲಿ 40:60 ಅನುಪಾತದಲ್ಲಿ ಅಭಿವೃದ್ಧಿಪಡಿಸಲು ತೀರ್ಮಾನಿಸಿ 2011 ಮಾರ್ಚ್ 30ರಂದು ಪ್ರಸ್ತಾವ ಸಲ್ಲಿಸಲಾಗಿತ್ತು. 2012ರ ಡಿಸೆಂಬರ್ 22ರಂದು ವಸತಿ ಯೋಜನೆಗೆ ₹ 160.42 ಕೋಟಿಗೆ ಅನುಮೋದನೆ ನೀಡಿದೆ’ ಎಂದರು.</p>.<p>‘ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿಗೆ (ಎನ್ಸಿಸಿ) ನಿರ್ಮಾಣ ಹೊಣೆ ನಿರ್ವಹಿಸುತ್ತಿದೆ. 80x50, 40x30, 20x30 ಅಡಿ ವಿಸ್ತೀರ್ಣದ ನಿವೇಶನಗಳು ಇವೆ. ಒಟ್ಟು 2,591 ನಿವೇಶನಗಳಿದ್ದು, ಈ ಪೈಕಿ ರೈತರಿಗೆ 1,036 (ಶೇ 40) ಹಾಗೂ ಪ್ರಾಧಿಕಾರಕ್ಕೆ 1,555 (ಶೇ 60) ಹಂಚಿಕೆ ಮಾಡಲಾಗಿದೆ. ಯೋಜನೆಯ ಅನುಷ್ಠಾನಕ್ಕೆ ಅನುದಾನ ಸಂಗ್ರಹ ನಿಟ್ಟಿನಲ್ಲಿ ಸಾರ್ವಜನಿಕರಿಂದ ನಿವೇಶನದ ಪ್ರಾರಂಭಿಕ ಠೇವಣಿ ಶೇ 10 ಮೊತ್ತದೊಂದಿಗೆ ಅರ್ಜಿ ಆಹ್ವಾನಿಸಲಾಗಿತ್ತು’ ಎಂದರು.</p>.<p>‘ಯೋಜನೆ ಕಾರಣಾಂತರಗಳಿಗೆ ನನೆಗುದಿಗೆ ಬಿದ್ದಿತ್ತು. ಕಳೆದ ಫೆಬ್ರುವರಿಯಿಂದ ಬಡಾವಣೆ ನಿರ್ಮಾಣ ಕೆಲಸವನ್ನು ಚುರುಕುಗೊಳಿಸಲಾಗಿದೆ. ಸೆಪ್ಟೆಂಬರ್ನಿಂದ ಕಾಮಗಾರಿಯನ್ನು ಮತ್ತಷ್ಟು ತ್ವರಿತವಾಗಿ ಮಾಡಲಾಗುತ್ತಿದೆ. ಈಗಾಗಲೇ 768 ನಿವೇಶನಗಳನ್ನು ಲಾಟರಿ ಮೂಲಕ ಹಂಚಿಕೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ಉಳಿಕೆ 510 ನಿವೇಶನಗಳನ್ನು ಶೇ 10 ಪ್ರಾರಂಭಿಕ ಠೇವಣಿಯೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2018ರ ಫೆಬ್ರುವರಿ 15 ಕೊನೆ ದಿನ. ಪ್ರಕ್ರಿಯೆ ಮುಗಿದ ನಂತರ, ಲಾಟರಿ ಎತ್ತುವ ಮೂಲಕ ಉಳಿಕೆ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು’ ಎಂದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಭೀಮನಿಡಿ ಮಾತನಾಡಿ, ‘ಈ ಬಡಾವಣೆಯು ಒಟ್ಟು 195 ಎಕರೆ ವಿಸ್ತೀರ್ಣ ಇದೆ. ರೈತರೊಂದಿಗೆ ಒಪ್ಪಂದ (ಎಂಒಯು) ಮಾಡಿಕೊಂಡು ಬಡಾವಣೆ ನಿರ್ಮಾಣ ಆರಂಭಿಸಲಾಗಿದೆ. ಒಳಚರಂಡಿ, ರಸ್ತೆ, ಪಾರ್ಕು ಮೊದಲಾ ದವನ್ನು ವ್ಯವಸ್ಥಿತವಾಗಿ ರೂಪಿಸಲು ಆದ್ಯ ಗಮನ ಹರಿಸಲಾಗಿದೆ’ ಎಂದರು.</p>.<p>‘ಬಡವಾಣೆ ಅಭಿವೃದ್ಧಿಗೆ ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿಗೆ ಈವರೆಗೆ ₹ 18.5 ಕೋಟಿ ಬಿಡುಗಡೆ ಮಾಡಲಾಗಿದೆ. ನಿವೇಶನಗಳಿಗೆ ಸರ್ಕಾರಿ ದರ ನಿಗದಿಪಡಿಸಲಾಗಿದೆ. ಬಡಾವಣೆ ಅಭಿವೃದ್ಧಿಗೆ ಕೆನರಾ ಬ್ಯಾಂಕಿನಿಂದ ಶೇ 8.8 ಬಡ್ಡಿದರದಲ್ಲಿ ₹ 50 ಕೋಟಿ ಸಾಲ ಪಡೆಯಲು ಪ್ರಾಧಿಕಾರ ನಿರ್ಧರಿಸಿದೆ. 2019ರ ಮಾರ್ಚ್ ಹೊತ್ತಿಗೆ ಬಡಾವಣೆ ನಿರ್ಮಾಣ ಪೂರ್ಣಗೊಳ್ಳಲಿದೆ’ ಎಂದು ಹೇಳಿದರು. ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಚಂದ್ರು, ಎಚ್.ಡಿ.ತಮ್ಮಯ್ಯ, ತರೇಸಾ, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಉಪ್ಪಳ್ಳಿ– ಇಂದಾವರ ಗ್ರಾಮಗಳ ರೈತರ ಸಹಭಾಗಿತ್ವದಲ್ಲಿ ಉಪ್ಪಳ್ಳಿ ಸಮೀಪ ಎ.ಬಿ.ವಾಜ ಪೇಯಿ ಬಡಾವಣೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದ್ದು, ಒಂದು ವರ್ಷದಲ್ಲಿ ಬಡಾವಣೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಹನೀಫ್ ತಿಳಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2008–09ನೇ ಸಾಲಿನಲ್ಲಿ ವಾಜಪೇಯಿ ವಸತಿ ಯೋಜನೆ ರೂಪಿಸಲಾಗಿತ್ತು. ನಿವೇಶನ ಬೇಡಿಕೆ ಸಮೀಕ್ಷೆಯಲ್ಲಿ ಒಟ್ಟು 7,954 ನಿವೇಶನಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ. ಉಪ್ಪಳ್ಳಿ–ಇಂದಾವರ ಗ್ರಾಮಗಳ ರೈತರ ಸಹಭಾಗಿತ್ವದಲ್ಲಿ 40:60 ಅನುಪಾತದಲ್ಲಿ ಅಭಿವೃದ್ಧಿಪಡಿಸಲು ತೀರ್ಮಾನಿಸಿ 2011 ಮಾರ್ಚ್ 30ರಂದು ಪ್ರಸ್ತಾವ ಸಲ್ಲಿಸಲಾಗಿತ್ತು. 2012ರ ಡಿಸೆಂಬರ್ 22ರಂದು ವಸತಿ ಯೋಜನೆಗೆ ₹ 160.42 ಕೋಟಿಗೆ ಅನುಮೋದನೆ ನೀಡಿದೆ’ ಎಂದರು.</p>.<p>‘ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿಗೆ (ಎನ್ಸಿಸಿ) ನಿರ್ಮಾಣ ಹೊಣೆ ನಿರ್ವಹಿಸುತ್ತಿದೆ. 80x50, 40x30, 20x30 ಅಡಿ ವಿಸ್ತೀರ್ಣದ ನಿವೇಶನಗಳು ಇವೆ. ಒಟ್ಟು 2,591 ನಿವೇಶನಗಳಿದ್ದು, ಈ ಪೈಕಿ ರೈತರಿಗೆ 1,036 (ಶೇ 40) ಹಾಗೂ ಪ್ರಾಧಿಕಾರಕ್ಕೆ 1,555 (ಶೇ 60) ಹಂಚಿಕೆ ಮಾಡಲಾಗಿದೆ. ಯೋಜನೆಯ ಅನುಷ್ಠಾನಕ್ಕೆ ಅನುದಾನ ಸಂಗ್ರಹ ನಿಟ್ಟಿನಲ್ಲಿ ಸಾರ್ವಜನಿಕರಿಂದ ನಿವೇಶನದ ಪ್ರಾರಂಭಿಕ ಠೇವಣಿ ಶೇ 10 ಮೊತ್ತದೊಂದಿಗೆ ಅರ್ಜಿ ಆಹ್ವಾನಿಸಲಾಗಿತ್ತು’ ಎಂದರು.</p>.<p>‘ಯೋಜನೆ ಕಾರಣಾಂತರಗಳಿಗೆ ನನೆಗುದಿಗೆ ಬಿದ್ದಿತ್ತು. ಕಳೆದ ಫೆಬ್ರುವರಿಯಿಂದ ಬಡಾವಣೆ ನಿರ್ಮಾಣ ಕೆಲಸವನ್ನು ಚುರುಕುಗೊಳಿಸಲಾಗಿದೆ. ಸೆಪ್ಟೆಂಬರ್ನಿಂದ ಕಾಮಗಾರಿಯನ್ನು ಮತ್ತಷ್ಟು ತ್ವರಿತವಾಗಿ ಮಾಡಲಾಗುತ್ತಿದೆ. ಈಗಾಗಲೇ 768 ನಿವೇಶನಗಳನ್ನು ಲಾಟರಿ ಮೂಲಕ ಹಂಚಿಕೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ಉಳಿಕೆ 510 ನಿವೇಶನಗಳನ್ನು ಶೇ 10 ಪ್ರಾರಂಭಿಕ ಠೇವಣಿಯೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2018ರ ಫೆಬ್ರುವರಿ 15 ಕೊನೆ ದಿನ. ಪ್ರಕ್ರಿಯೆ ಮುಗಿದ ನಂತರ, ಲಾಟರಿ ಎತ್ತುವ ಮೂಲಕ ಉಳಿಕೆ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು’ ಎಂದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಭೀಮನಿಡಿ ಮಾತನಾಡಿ, ‘ಈ ಬಡಾವಣೆಯು ಒಟ್ಟು 195 ಎಕರೆ ವಿಸ್ತೀರ್ಣ ಇದೆ. ರೈತರೊಂದಿಗೆ ಒಪ್ಪಂದ (ಎಂಒಯು) ಮಾಡಿಕೊಂಡು ಬಡಾವಣೆ ನಿರ್ಮಾಣ ಆರಂಭಿಸಲಾಗಿದೆ. ಒಳಚರಂಡಿ, ರಸ್ತೆ, ಪಾರ್ಕು ಮೊದಲಾ ದವನ್ನು ವ್ಯವಸ್ಥಿತವಾಗಿ ರೂಪಿಸಲು ಆದ್ಯ ಗಮನ ಹರಿಸಲಾಗಿದೆ’ ಎಂದರು.</p>.<p>‘ಬಡವಾಣೆ ಅಭಿವೃದ್ಧಿಗೆ ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿಗೆ ಈವರೆಗೆ ₹ 18.5 ಕೋಟಿ ಬಿಡುಗಡೆ ಮಾಡಲಾಗಿದೆ. ನಿವೇಶನಗಳಿಗೆ ಸರ್ಕಾರಿ ದರ ನಿಗದಿಪಡಿಸಲಾಗಿದೆ. ಬಡಾವಣೆ ಅಭಿವೃದ್ಧಿಗೆ ಕೆನರಾ ಬ್ಯಾಂಕಿನಿಂದ ಶೇ 8.8 ಬಡ್ಡಿದರದಲ್ಲಿ ₹ 50 ಕೋಟಿ ಸಾಲ ಪಡೆಯಲು ಪ್ರಾಧಿಕಾರ ನಿರ್ಧರಿಸಿದೆ. 2019ರ ಮಾರ್ಚ್ ಹೊತ್ತಿಗೆ ಬಡಾವಣೆ ನಿರ್ಮಾಣ ಪೂರ್ಣಗೊಳ್ಳಲಿದೆ’ ಎಂದು ಹೇಳಿದರು. ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಚಂದ್ರು, ಎಚ್.ಡಿ.ತಮ್ಮಯ್ಯ, ತರೇಸಾ, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>