ಅಂತಿಮ ವಿಚಾರಣೆಯನ್ನು ಶೀಘ್ರವೇ ಆರಂಭಿಸುವುದಕ್ಕೆ ಸುನ್ನಿ ವಕ್ಫ್ ಮಂಡಳಿ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ದುಶ್ಯಂತ ದವೆ ಮತ್ತು ರಾಜೀವ್ ಧವನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಅಂತಿಮ ವಿಚಾರಣೆ ಆರಂಭವನ್ನು 2018ರ ಫೆಬ್ರುವರಿ 8ಕ್ಕೆ ನಿಗದಿ ಮಾಡಿತ್ತು.