ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರದಲ್ಲಿನ ಬೀದರ್–ಕಲಬುರ್ಗಿ ರೈಲು ಮಾರ್ಗ ಮಂಜೂರು ಕುರಿತು ಸಂಸತ್ನಲ್ಲಿ ಪ್ರಸ್ತಾಪಿಸಿರುವ ವಿಷಯಕ್ಕೆ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಅವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.