ಬೆಂಗಳೂರು: ‘ವಿವಿಧ ಗ್ರಾಮ ಪಂಚಾಯ್ತಿ ಅಧ್ಯಕ್ಷ– ಉಪಾಧ್ಯಕ್ಷರ ವಿರುದ್ಧ ಸ್ವೀಕರಿಸಲಾಗಿರುವ ಅವಿಶ್ವಾಸ ನಿರ್ಣಯಗಳ ಕುರಿತಂತೆ ಮುಂದಿನ ಕ್ರಮಕ್ಕೆ ಮುಂದಾಗಬಾರದು. ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಸಲ್ಲಿಸಲಾಗಿರುವ 20ಕ್ಕೂ ಹೆಚ್ಚು ಅರ್ಜಿಗಳನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.