ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಮಾರ್ಗ ನಿರ್ಮಿಸಿ

Last Updated 8 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

‘ತುಮಕೂರು– ದಾವಣಗೆರೆ ರೈಲು ಮಾರ್ಗವನ್ನು ನಿರ್ಮಿಸುತ್ತೇವೆ’ ಎಂದು ಸರ್ಕಾರ ಅನೇಕ ವರ್ಷಗಳಿಂದ ಭರವಸೆ ನೀಡುತ್ತಿದೆ. ಆದರೆ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಆಗುತ್ತಿಲ್ಲ.

ಈ ರೈಲು ಮಾರ್ಗದ ನಿರ್ಮಾಣದಿಂದ ಉತ್ತರ ಕರ್ನಾಟಕಕ್ಕೆ ಹೋಗಲು ತಗಲುವ ಸಮಯದಲ್ಲಿ ಸುಮಾರು ಮೂರು ಗಂಟೆಗಳಷ್ಟು ಕಡಿಮೆಯಾಗುತ್ತದೆ. ಬರಪೀಡಿತ ಜಿಲ್ಲೆ ಚಿತ್ರದುರ್ಗದಿಂದ ಬೆಂಗಳೂರಿಗೆ ನೇರ ರೈಲು ಮಾರ್ಗವಿಲ್ಲ. ಈ ಕೊರತೆಯನ್ನು ನೀಗಿಸುವ ಇಚ್ಛೆ ಸ್ಥಳೀಯ ಯಾವ ರಾಜಕಾರಣಿಯಲ್ಲೂ ಇದ್ದಂತಿಲ್ಲ. ಸರ್ಕಾರ ಈ ಬಗ್ಗೆ ಗಮನಹರಿಸಿ ಆದಷ್ಟು ಬೇಗ ತುಮಕೂರು, ಶಿರಾ, ಹಿರಿಯೂರು, ಚಿತ್ರದುರ್ಗ, ದಾವಣಗೆರೆ ರೈಲು ಮಾರ್ಗವನ್ನು ನಿರ್ಮಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT